ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ


ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಸಿಬಿ ಪೊಲೀಸರ ಹಾಗೂ ಸಂಘ ಪರಿವಾರದ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದ ಪ್ರತಿಭಟನಾಕಾರರು, ಅಮಾಯಕ ಯುವಕ ಖುರೇಶ್ ಎಂಬಾತನನ್ನು ಅಕ್ರಮಾಇ ಬಂಧಿಸಿ ಮಾರಣಾಂತಿಕ ದೌರ್ಜನ್ಯ ಎಸಗಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರು ವಿನಾ ಕಾರಣ ಲಾಠಿ ಚಾಜ್ ನಡೆಸಿ ಹಲ್ಲೆ ನಡೆಸಿದ್ದಾರೆ. ಇದು ನಾಗರಿಕರ ಹಕ್ಕು ದಮನಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಈ ಕುರಿತು ಮಂಗಳೂರು ಕಮೀಷನರ್ ಎಂ.ಚಂದ್ರಶೇಖರ್ ಹೇಳಿಕೆ ನೀಡಿರುವುದು ಸರಿಯಾಗಿಲ್ಲ. ಆದ್ದರಿಂದ ಆಡಳಿತ ವ್ಯವಸ್ಥೆ ಕೂಡಲೇ ಎಚ್ಚೆತ್ತುಕೊಂಡು ಗಂಭೀರ ದೌರ್ಜನ್ಯದಲ್ಲಿ ಭಾಗಿಯಾಗಿರುವ ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಸುನೀಲ್ ನಾಯ್ಕ್ ಮತ್ತು ಎಸ್.ಐ. ಶಾಂ ಸುಂದರ್ ಸೇರಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಅಹಮದ್ ಖುರೇಷಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಸುಮಾರು ೩೦೦ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ಜಿಲ್ಲಾ ಸಮಿತಿ ಸದಸ್ಯ ಇಮ್ತಿಯಾಜ್ ತುಂಬೆ ಮಾತನಾಡಿದರು. ಪಿಎಫ್ ಐ ಬಂಟ್ವಾಳ ಸಮಿತಿ ಸದಸ್ಯ ಝಕಾರಿಯಾ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಲೀಂ ಕುಂಪನಮಜಲು ಸಹಿತ ಪ್ರಮುಖ ನಾಯಕರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*