ಸ್ವಾಮಿ ವಿವೇಕಾನಂದರ 154ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹದ ಸಂದರ್ಭದಲ್ಲಿ ಜನವರಿ ತಿಂಗಳಿನಲ್ಲಿ ನಡೆಸಲಾದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಪುರಸ್ಕರಿಸುವ ಕಾರ್ಯಕ್ರಮ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮೋಹನ್ ರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನಗದು ಹಾಗೂ ಪುಸ್ತಕ ಬಹುಮಾನಗಳೊಂದಿಗೆ ವಿಜೇತರನ್ನು ಪುರಸ್ಕರಿಸಿದರು. ಬಳಿಕ ಮಾತನಾಡಿದ ಅವರು ವಿವೇಕಾನಂದರ ಆದರ್ಶಗಳನ್ನು ಅಧ್ಯಯನ ಮಾಡಿ ಯುವಜನತೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆಯಿತ್ತರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ.ಗಿರೀಶ ಭಟ್ ಮಾತನಾಡಿ, ಅಧ್ಯಾತ್ಮ ಸಾಧನೆಯೊಂದಿಗೆ ದೇಶದ ಬಗ್ಗೆ ಚಿಂತಿಸಿ ರಾಷ್ಟ್ರಪ್ರಜ್ಞೆಯನ್ನು ಜಾಗೃತಗೊಳಿಸಿದ ವಿವೇಕಾನಂದರು ಯುವಸಮೂಹಕ್ಕೆ ಸದಾ ಸ್ಫೂರ್ತಿ ಎಂದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಷ್ಟ್ರೀಯ ಯುವ ಸಪ್ತಾಹ- ಬಹುಮಾನ ವಿತರಣೆ ಕಾರ್ಯಕ್ರಮ"
Be the first to comment on "ರಾಷ್ಟ್ರೀಯ ಯುವ ಸಪ್ತಾಹ- ಬಹುಮಾನ ವಿತರಣೆ ಕಾರ್ಯಕ್ರಮ"