ಬಂಟ್ವಾಳ

ಎ.ಪಿ. ಉಸ್ತಾದ್ ಮಾರಿಪಳ್ಳಕ್ಕೆ

ಮಸ್ಜಿದುಲ್ ಖಿಳ್‌ರ್ ಮತ್ತು ದಾರುಲ್ ಉಲೂಂ ಮದರಸ ಹಾಗೂ ಎಸ್‌ವೈಎಸ್, ಎಸ್ಸೆಸ್ಸೆಫ್ ಮಾರಿಪಳ್ಳ ಪೇರಿಮಾರ್ ವತಿಯಿಂದ ಎಪ್ರಿಲ್ 15ರಂದು ಮಗ್ರೀಬ್ ನಮಾಝ್ ಬಳಿಕ ಪೇರಿಮಾರಿನಲ್ಲಿ ನಡೆಯುವ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮದಲ್ಲಿ ಅಖಿಲ ಭಾರತ ಸುನ್ನೀ ಜಂ-ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಭಾಗವಹಿಸಿ ಮುಖ್ಯ ಪ್ರಭಾಷಣಗೈಯಲಿದ್ದಾರೆ ಎಂದು ಕಾರ್ಯಕ್ರಮ ನಿರ್ವಾಹಕ ಸಮಿತಿ ಚೆಯರ್‌ಮ್ಯಾನ್ ಮುಹಮ್ಮದ್ ರಫೀಕ್ ಸಅದಿ ಅಲ್‌ಅಫ್ಲಲಿ ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುಅ ಆಶೀರ್ವಚನ ನೀಡಲಿದ್ದಾರೆ. ಅಸೈಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸಿ ಕಿಲ್ಲೂರು ತಂಙಳ್ ಸಮಾರೋಪ ಪ್ರಾಥನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ವಹಿಸಲಿದ್ದು ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಸಿದ್ದೀಕ್ ಸಖಾಫಿ ಅರಿಯೂರು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಎನ್.ಕೆ.ಎಂ.ಶಾಫಿ ಸಅದಿ, ಕೆ.ಎಂ.ಸಿದ್ದೀಖ್ ಮೋಂಟುಗೋಳಿ ಭಾಷಣ ಮಾಡಲಿದ್ದು ಎಂ.ಪಿ.ಎಂ. ಅಶ್ರಫ್ ಸಅದಿ ಮಲ್ಲೂರು ಸಂದೇಶ ಭಾಷಣ ಮಾಡಲಿದ್ದಾರೆ. ಸಚಿವ ರಮಾನಾಥ ರೈ, ಯೇನೆಪೋಯ ಅಬ್ದುಲ್ಲ ಕುಂಞಿ, ಸೈಯದ್ ಮುಸ್ತಾಕುರ್ರಹ್ಮಾನ್ ತಂಙಳ್ ಚಟ್ಟಕ್ಕಲ್ ಸಹಿತ ಹಲವು ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಿರ್ವಾಹಕ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಝಾಕ್ ಬಿ., ಕೋ ಆರ್ಡಿನೇಟರ್ ಇಬ್ರಾಹೀಂ ಖಲೀಲ್ ಮುಸ್ಲಿಯಾರ್, ಜನರಲ್ ಕನ್ವೀನರ್ ಅಬ್ದುಲ್ ಫಲೂಲ್, ಮಸೀದಿ ಮತ್ತು ಮದರಸದ ಅಧ್ಯಕ್ಷ ಪಿ.ಎಂ.ಶಾಫಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ