ನಾಟಕ

ಮಂಚಿಯಲ್ಲಿ ನಡೆಯಲಿದೆ ಬಿ.ವಿ.ಕಾರಂತ ನೆನಪಿನ ನಾಟಕೋತ್ಸವ

ಕಳೆದ ಎಂಟು ವರ್ಷಗಳಿಂದ ಬಿ.ವಿ.ಕಾರಂತ ನೆನಪಿನ ನಾಟಕೋತ್ಸವ ಅವರ ಹುಟ್ಟೂರು ಮಂಚಿಯಲ್ಲಿ ನಡೆಯುತ್ತಿದೆ. ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಕಾರಂತರನ್ನು ನೆನಪಿಸಿಕೊಳ್ಳುವ ನಾಟಕೋತ್ಸವವನ್ನು ಪ್ರತಿ ವರ್ಷ ಮಾಡಿಕೊಂಡು ಬರುತ್ತಿದೆ. ಈ ಉತ್ಸವದಲ್ಲಿ ಕರ್ನಾಟಕದ ಶ್ರೇಷ್ಠ ತಂಡಗಳು ಭಾಗವಹಿಸಿ, ಕಾರಂತರ ಆಶಯದ ನಾಟಕಗಳನ್ನು ಪ್ರದರ್ಶಿಸಿವೆ. ಮಕ್ಕಳ ರಂಗಶಿಬಿರಗಳ ಮೂಲಕ ಕಾರಂತ ವಿಚಾರಧಾರೆಗಳನ್ನು ಪರಿಚಯಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸುವ ಪ್ರಯತ್ನಗಳೂ ಸಾಗಿವೆ. ವಿಚಾರಗೋಷ್ಠಿ, ಚಲನಚಿತ್ರ ಪ್ರದರ್ಶನದಂಥ ಸಾಂಸ್ಕೃತಿಕ ಚಟುವಟಿಕೆಗಳಿಗೆ ರಂಗಭೂಮಿಕಾ ಟ್ರಸ್ಟ್ ವೇದಿಕೆಯಾಗಿದೆ. ಬಿ.ವಿ.ಕಾರಂತ ಹೆಸರಲ್ಲಿ ಮಂಚಿಯನ್ನು ಸಾಂಸ್ಕೃತಿಕ ಗ್ರಾಮವೆಂದು ಗುರುತಿಸುವಂತಾಗಬೇಕು ಎಂಬ ಧ್ಯೇಯೋದ್ದೇಶದೊಂದಿಗೆ ಈ ಕಾರ್ಯಕ್ರಮಗಳನ್ನು ಕಳೆದ ಎಂಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇವೆ ಎನ್ನುತ್ತಾರೆ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್.

ಜಾಹೀರಾತು

ಈ ಬಾರಿ ಮಂಚಿ ಕೊಳ್ನಾಡು ಗ್ರಾಮದ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏ.14, 15, 16ರಂದು ನಾಟಕೋತ್ಸವ ನಡೆಯಲಿದೆ.

ಏನೇನಿದೆ:

ಏ.14ರಂದು ಸಂಜೆ ಕಾರ್ಯಕ್ರಮವನ್ನು ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ, ಕರ್ಣಾಟಕ ಬ್ಯಾಂಕ್ ಮುಖ್ಯ ಪ್ರಬಂಧಕ ಶ್ರೀನಿವಾಸ ದೇಶಪಾಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಡಿ.ಎಂ. ಭಾಗವಹಿಸುವರು. ಈ ಸಂದರ್ಭ ಮಂಗಳೂರಿನ ಸುವರ್ಣ ಪ್ರತಿಷ್ಠಾನ ವತಿಯಿಂದ ಸದಾನಂದ ಸುವರ್ಣ ನಿರ್ದೇಶನದ ನಾಟಕ ಉರುಳು ಪ್ರದರ್ಶನಗೊಳ್ಳಲಿದೆ.

ಜಾಹೀರಾತು

ಏ.15ರಂದು ಕೊಡವೂರಿನ ಸುಮನಸ ಕಲಾವಿದರಿಂದ ಮುದ್ರಾರಾಕ್ಷಸ ನಾಟಕ ಪ್ರದರ್ಶನ ನಡೆಯುವುದು.

ಏ.16ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ರಂಗನಿರ್ದೇಶಕ ಪ್ರಸಾದ್ ರಕ್ಷಿದಿ, ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್, ಕೊಳ್ನಾಡು ಗ್ರಾಪಂ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು  ಭಾಗವಹಿಸುವರು. ಅಂದು ಬೆಳ್ಳೇಕೆರೆಯ ಜೈ ಕರ್ನಾಟಕ ಸಂಘ ವತಯಿಂದ ಬಹುಮಾನ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ