ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದಲ್ಲಿರುವ ರಾಜರಾಜೇಶ್ವರೀ ಕಾಂಪ್ಲೆಕ್ಸ್ನಲ್ಲಿರುವ ಜೀವನ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಒಂದು ವಾರಗಳ ಕಾಲ ಮಕ್ಕಳಿಗಾಗಿ ನಡೆಯುವ ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಶನಿವಾರ ಸಂಭ್ರಮದ ಚಾಲನೆ ದೊರೆತಿದೆ.
ನ್ಯಾಯವಾದಿಗಳಾದ ಚೇತನಾ ಆರ್.ಶೆಟ್ಟಿ ದಂಡೆ, ಚಿದಾನಂದ ಪೂಜಾರಿ ಕಡೇಶಿವಾಲಯ, ಶ್ರೀನಿವಾಸ ದೈಪಲ, ಉಧ್ಯಮಿ ಪ್ರಶಾಂತ್ ಕೋಟ್ಯಾನ್, ರಾಮಲ್ಕಟ್ಟೆ ಎಳೆಯರ ಬಳಗದ ಮಾತೃ ಸಂಘದ ಅಧ್ಯಕ್ಷೆ ವಿದ್ಯಾ ಅರುಣ್ ಮೊದಲಾದವರು ಡೋಲಕ್, ಕೊಳಲು, ತಮಟೆ, ಟಮ್ಕಿ, ತಂಬೂರಿ ಬಾರಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಕವಯಿತ್ರಿ ರಜನಿ ಚಿಕ್ಕಯ ಮಠ, ಯಕ್ಷಲೋಕ ನಿರ್ದೇಶಕ ಗೋಪಾಲ ಅಂಚನ್, ಶಿಬಿರ ಸಂಯೋಜಕಿ ಪ್ರತಿಮಾ ಜಿ.ಅಂಚನ್, ಕಲಾವಿದ ಲೋಲಾಕ್ಷ ನೆತ್ತರಕೆರೆ ಮೊದಲಾದವರಿದ್ದರು. ಶಿಬಿರವು ಪ್ರತಿದಿನ ಬೆಳಿಗ್ಗೆ ೯.೩೦ರಿಂದ ಸಂಜೆ ೪.೩೦ರತನಕ ನಡೆಯಲಿದ್ದು ಎಲ್ಲಾ ರೀತಿಯ ಸಂಗೀತ, ಅಭಿನಯ ಕಲೆ, ಸಂಭಾಷಣಾ ಶೈಲಿ, ಹಾವಭಾವ, ನಟನಾ ಕೌಶಲ್ಯ ಮೊದಲಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಚಾಲನೆ"
Be the first to comment on "ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಚಾಲನೆ"