ಕಲ್ಲಡ್ಕ

ವೈಷ್ಣವಿ ಟೆಕ್ಸ್ ಟೈಲ್ಸ್ ಶುಭಾರಂಭ

ಕಲ್ಲಡ್ಕ ಹೃದಯಭಾಗದ ಶ್ರೀರಾಮ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಂಡಿರುವ ವೈಷ್ಣವಿ ಟೆಕ್ಸ್‌ಟೈಲ್ ವಸ್ತ್ರ ಮಳಿಗೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು.


ಶ್ರೀ ರಾಮ ಸಂಕೀರ್ಣದಲ್ಲೀ ಈಗಾಗಲೇ ಎರಡು ಬ್ಯಾಂಕಿಂಗ್ ಸಂಸ್ಥೆಗಳು ಆರಂಭಗೊಂಡಿದೆ. ಇದೀಗ ವಸ್ತ್ರ ಮಳಿಗೆ ಆರಂಭಗೊಂಡಿರುವುದು ಸಂತಸದ ವಿಚಾರ. ಮನುಷ್ಯನ ವ್ಯಕ್ತಿತ್ವಕ್ಕೆ ಒಪ್ಪುವಂತಹ ವಸ್ತ್ರ ಸಂಹಿತೆಗಳು ಬೇಕು. ಅದು ವೈಷ್ಣವಿ ಟೆಕ್ಸ್‌ಟೈಲ್ಸ್‌ನಲ್ಲಿ ಲಭ್ಯವಾಗಲಿದೆ ಎಂದು ಶುಭ ಹಾರೈಸಿದರು.
ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಶುಭಹಾರೈಸಿ ಮಾತನಾಡಿ ಕಲ್ಲಡ್ಕದಲ್ಲಿ ಸುಂದರವಾಗಿ ನಿರ್ಮಾಣಗೊಂಡಿರುವ ಶ್ರೀರಾಮ ಸಂಕೀರ್ಣದಲ್ಲಿ ವೈಷ್ಣವಿ ಟೆಕ್ಸ್‌ಟೈಲ್ ಶುಭಾರಂಭಗೊಳ್ಳುವ ಮೂಲಕ ಆಕರ್ಷಣೆಯ ಕೇಂದ್ರವಾಗಿದೆ. ಮುಂದಿನ ದಿನದಲ್ಲಿ ಉತ್ತಮ ವ್ಯಾಪರಿ ಮಳಿಗೆಯಾಗಿ ಇದು ರೂಪುಗೊಳ್ಳಲಿ ಎಂದರು.

ಜಾಹೀರಾತು


ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ರಾಜೇಶ್‌ನಾಕ್ ಉಳಿಪಾಡಿಗುತ್ತು, ಜಗದೀಶ ಅಧಿಕಾರಿ, ದಿನೇಶ್ ಅಮ್ಟೂರು ಮತ್ತಿತರರು ಭೇಟಿ ನೀಡಿ ಶುಭಹಾರೈಸಿದರು. ಸಂಸ್ಥೆಯ ಪಾಲುದಾರರಾದ ಗೋಪಾಲಕೃಷ್ಣ ಭಟ್, ಸುಲೋಚನಾ ಭಟ್, ಜಗದೀಶ ಎಡಪಡಿತ್ತಾಯ, ಚಿತ್ರಾ ಎಡಪಡಿತ್ತಾಯ, ಮಧುರಾ ಹಾಜರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ