ಜಲೀಲ್ ಹತ್ಯೆ ಪ್ರಕರಣ: ಪೊಲೀಸರಿಗೆ ದೊರಕಿತೇ ಮಹತ್ವದ ಸುಳಿವು?

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆಗೆ ಸಂಬಂಧಿಸಿ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆಯೇ?

ಮಿತ್ತನಡ್ಕ ಮುಗುಳಿ ರಸ್ತೆ ಬದಿ ಸೋಮವಾರ ಎರಡು ಬೈಕ್, ಎರಡು ತಲವಾರು, ಬಟ್ಟೆಬರೆ ಪತ್ತೆಯಾಗಿದ್ದು ಈ ಅನುಮಾನಗಳಿಗೆ ಕಾರಣವಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿ ತೀವ್ರಗತಿಯಲ್ಲಿ ರಾತ್ರಿ ಹಗಲೆನ್ನದೆ ತನಿಖೆ ನಡೆಸುತ್ತಿರುವ ಪೊಲೀಸರು ಒಂದೆರಡು ದಿನಗಳಲ್ಲೇ ಪ್ರಕರಣ ಬೇಧಿಸುವುದಾಗಿ ಹೇಳಿದ್ದಾರೆ.

ರಸ್ತೆ ಬದಿ ಸೋಮವಾರ ಪತ್ತೆಯಾದ ವಸ್ತುಗಳು ಯಾರದ್ದು ಎಂಬ ವಿಚಾರವಾಗಿ ದಿನವಿಡೀ ಊಹಾಪೋಹಗಳು ವಾಟ್ಸಾಪ್ ಗಳಲ್ಲಿ ಹರಿದಾಡಿದ್ದವು. ಇದು ಆರೋಪಿಗಳಿಗೆ ಸಂಬಂಧಿಸಿದ್ದೇ, ಅಥವಾ ಬೇರೆ ಪ್ರಕರಣಗಳಿಗೆ ಸಂಬಂಧಿಸಿದ್ದೇ ಅಥವಾ ಜಲೀಲ್ ಹತ್ಯೆ ತನಿಖೆ ದಾರಿ ತಪ್ಪಿಸಲು ಹೆಣೆದ ತಂತ್ರವೇ ಎಂಬ ಕುರಿತು ಇನ್ನೂ ಅನುಮಾನಗಳು ಹರಡಿಕೊಂಡಿವೆ.

ಏನು ಕಂಡುಬಂದಿತ್ತು:ಕರ್ನಾಟಕ-ಕೇರಳ ಗಡಿಭಾಗದ ಮುಗುಳಿ ಎಂಬಲ್ಲಿಯ ಉಪ್ಪಳ ರಸ್ತೆ ಬದಿಯಲ್ಲಿ ಇಂದು ಬೆಳಗ್ಗೆ ಸ್ಥಳೀಯರು ನಡೆದು ಹೋಗುತ್ತಿದ್ದ ವೇಳೆ ಹಳೆಯ ಎರಡು ಪಲ್ಸರ್ ಬೈಕ್‌ಗಳು ಬಿದ್ದ ಸ್ಥಿತಿಯಲ್ಲಿ ಕಂಡುಬಂದಿವೆ. ಬೈಕ್ ಪಕ್ಕದಲ್ಲಿ ಎರಡು ತಲವಾರ್ ಹಾಗೂ ನಾಲ್ಕು ಜೋಡಿ ಪ್ಯಾಂಟ್ ಹಾಗೂ ಶರ್ಟ್‌ಗಳು ಪತ್ತೆಯಾಗಿವೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಸ್ತುಗಳನ್ನು ವಶಕ್ಕೆ ಪಡೆದು ಜಲೀಲ್ ಕೊಲೆಗೆ ಸಂಬಂಧಿಸಿದ ವಸ್ತುಗಳೇ ಎಂಬುದರ ಬಗ್ಗೆ ತನಿಖೆ ಕೈಗೆತ್ತಿಕೊಂ ಡಿದ್ದಾರೆ.

ಇದು ಯಾವುದು?

ರಸ್ತೆ ಬದಿಯಲ್ಲಿ ಬೈಕುಗಳು ಪತ್ತೆಯಾಗಿವೆ. ಹತ್ಯೆಯಾದ ದಿನದಿಂದ ಸೋಮವಾರದವರೆಗೆ ಇದು ಎಲ್ಲಿ ಇತ್ತು, ಯಾರಿಗು ಯಾಕೆ ಇಷ್ಟು ದಿನ ಕಾಣಿಸಲಿಲ್ಲ ಎಂಬುದೂ ನಿಗೂಢ. ಸ್ಥಳದಲ್ಲಿ ಕಂಡುಬಂದ ತಲವಾರು, ಬಟ್ಟೆಬರೆಗಳೂ ಇರಿಸಿದಂತಿವೆ ಎಂಬ ಕಾರಣದಿಂದ ತನಿಖೆಯ ದಿಕ್ಕುತಪ್ಪಿಸಲು ಇವನ್ನು ಹಾಕಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪತ್ತೆಯಾದ ಎರಡು ಬೈಕುಗಳ ಪೈಕಿ ಒಂದು ಕಳವಾದ ಬೈಕು ಆಗಿರಬಹುದೇ ಎಂಬ ಪರಿಶೀಲನೆ ನಡೆಸುತ್ತಿದ್ದಾರೆ. ವಿಟ್ಲ ಪೊಲೀಸರು ಅನಾಥ ವಸ್ತುಗಳು ಪತ್ತೆ ಎಂಬ ಕಾಲಂನಡಿ ಪ್ರಕರಣ ದಾಖಲಿಕೊಂಡಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜಲೀಲ್ ಹತ್ಯೆ ಪ್ರಕರಣ: ಪೊಲೀಸರಿಗೆ ದೊರಕಿತೇ ಮಹತ್ವದ ಸುಳಿವು?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*