ಬಂಟ್ವಾಳ

ಮಂಚಿ ಕುಕ್ಕಾಜೆ ಸರಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಕುಕ್ಕಾಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಈ ಶಾಲೆಯ ಮಕ್ಕಳು ಉತ್ತಮ ಪ್ರೆಜೆಗಳಾಗಲಿ, ಅವರ ಪ್ರತಿಭೆಗೆ ಇಂತಹಾ ಕಾರ್ಯಕ್ರಮಗಳು ಪ್ರೋತ್ಸಾಹ ಸಿಗುತ್ತದೆ ಎಂದರು. ಮುಖ್ಯ ಅಥಿತಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಂಚಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್‍ದಾಸ್ ಶೆಟ್ಟಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್, ಜಿ.ಎಂ.ಇಬ್ರಾಹಿಂ, ಕೇಶವ ರಾವ್, ಆಸ್ಯಮ್ಮ, ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್, ಉಪಾಧ್ಯಕ್ಷೆ ನಳಿನಿ, ಶಾಲಾ ನಿವೃತ್ತ ಶಿಕ್ಷಕ ದೂಮಣ್ಣ ರೈ, ನವಯುಗ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಹಸೈನಾರ್ ಪಿ.ಕೆ., ಎಸ್.ಡಿ.ಎಂ.ಸಿ  ಮಾಜಿ ಅಧ್ಯಕ್ಷ ಗಣೇಶ್ ಐತಾಳ್, ಮೋಹನ್ ಪುಚ್ಚೆಕೆರೆ ಉಪಸ್ಥಿತರಿದ್ದರು.

ಮಾಣಿಲ ಸ.ಫ್ರೌ. ಶಾಲೆಗೆ ಭಡ್ತಿ ಹೊಂದಿದ ದೈಹಿಕ ಶಿಕ್ಷಕ ಉಮಾನಾಥ ರೈ ಮೇರಾವು, ಸೆರ್ಕಳ ಶಾಲೆಗೆ ವರ್ಗಾವಣೆಗೊಂಡ ಸಹಶಿಕ್ಷಕಿ ಸವಿತಾ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.  ವಿಧ್ಯಾರ್ಥಿಗಳು ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನೀಡಿ ಮನರಂಜಿಸಿದರು. ವಿಶೇಷ ಆಕರ್ಷಣೆ ಸ್ಟಾರ್ ಕಿಡ್ಸ್ ತಂಡ ಮಂಗಳುರು ಇವರಿಂದ ನೃತ್ಯ ಗಾನ ವೈಭವ ಸಭಿಕರಿಂದ ಮೆಚ್ಚುಗೆ ಪಡೆಯಿತು. ಮುಖ್ಯ ಶಿಕ್ಷಕಿ ರೋಹಿಣಿ ಸ್ವಾಗತಿಸಿ, ಉಪಾಧ್ಯಕ್ಷೆ ನಳಿನಿ ವಂದಿಸಿದರು. ಸಹಶಿಕ್ಷಕರಾದ ಪ್ರಸಾದ್, ಶುಭ, ವೆಂಕಟೇಶ್ ಮತ್ತು ನಾಗಪ್ಪ ಕಾರ್ಯಕ್ರಮ ನಿರೂಪಿಸಿದರು. ಆ ದಿನದ ದ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಹಮೀದ್ ನೆರವೇರಿಸಿದರು. ಶಿಕ್ಷಣ ಸಂಯೋಜಕರಾದ ಪ್ರಕಾಶ್ ಸ್ಪರ್ಧಾ ವಿಜೇತರಿಗೆ  ಬಹುಮಾನ ವಿತರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ