ಬಿ.ಸಿ.ರೋಡಿನಲ್ಲಿ ಜಲೀಲ್ ಕರೋಪಾಡಿ ಸಂತಾಪ ಸಭೆ

ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸಲು ಭಯದ ವಾತಾವರಣ ನಿರ್ಮಾಣವಾಗಿದೆ. ಭದ್ರತೆ ಇಲ್ಲದ ಜನಪ್ರತಿನಿಗಳೆಂದರೆ ಅದು ಗ್ರಾಮ ಪಂಚಾಯತ್ ಸದಸ್ಯರು.

ಜಾಹೀರಾತು

ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ನಡೆದ ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆಗೆ ಸಂತಾಪ ಸೂಚಕ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಗೊಂಡಿತು.

ಜಲೀಲ್ ಹತ್ಯೆಯನ್ನು ಖಂಡಿಸಿ ಹಾಗೂ ಅವರಿಗೆ ಸಂತಾಪ ಸೂಚಿಸಿ ಗ್ರಾಮ ಪಂಚಾಯತ್ ಪ್ರತಿನಿಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ಸಭೆ ಗುರುವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಗ್ರಾಪಂ ಪ್ರತಿನಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊಳ್ನಾಡು ಸುಭಾಶ್ಚಂದ್ರ ಶೆಟ್ಟಿ, ಜಲೀಲ್ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಕಾರ್ಯ ನಡೆಯಬೇಕು ಎಂದರು. ಗ್ರಾಮ ಪಂಚಾಯತ್ ಸದಸ್ಯರಾಗಿ ಅದರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವ ಸಂದರ್ಭ, ಆತಂಕ, ಅಡ್ಡಿ ಬರುವುದು ಸಹಜ. ಆದರೆ ಹತ್ಯೆಯಂಥ ಘಟನೆಗಳು ಇಡೀ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥದ್ದಾಗಿದೆ. ಈ ಕುರಿತು ಜಿಲ್ಲಾ ಮಟ್ಟದಲ್ಲಿ ಸಭೆಯೊಂದನ್ನು ಕರೆದು ಜಲೀಲ್ ಹೆಸರು ಶಾಶ್ವತವಾಗಿ ಉಳಿಸುವಂಥ ಕಾರ್ಯವನ್ನು ನಡೆಸಲಾಗುವುದು ಎಂದು ಹೇಳಿದರು.

ಜಾಹೀರಾತು

ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಣಕ:

ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಜಲೀಲ್ ಹತ್ಯೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಣಕ ಎಂದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಉತ್ತಮ ಕಾರ್ಯ ನಡೆಸಿದ್ದ ಜಲೀಲ್ ಜನಾನುರಾಗಿಯಾಗಿದ್ದರು. ಆದರೆ ಹಾಡಹಗಲೇ ಅವರನ್ನು ಹತ್ಯೆ ಮಾಡಿದ ಘಟನೆ ಆಘಾತ ತಂದಿದೆ ಎಂದರು.

ಗ್ರಾಪಂ ಪ್ರತಿನಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ರಾಜೇಶ್ ಬಾಳೇಕಲ್ಲು ಮಾತನಾಡಿ, ಜಲೀಲ್ ಹತ್ಯೆಯನ್ನು ನಂಬಲಾಗುತ್ತಿಲ್ಲ. ಗ್ರಾಪಂನ ಎಲ್ಲ ಪ್ರತಿನಿಗಳೊಂದಿಗೆ ಉತ್ತಮ ಒಡನಾಟವನ್ನು ಅವರು ಇಟ್ಟುಕೊಂಡಿದ್ದರು ಎಂದರು.

ಜಾಹೀರಾತು

ರಾಜ್ಯ ಪ್ರತಿನಿ ಪುರುಷ ಎನ್. ಸಾಲಿಯಾನ್ ಮಾತನಾಡಿ, ಇವತ್ತು ಭದ್ರತೆ ಇಲ್ಲದ ಜನಪ್ರತಿನಿಗಳು ಎಂದರೆ ಅದು ಗ್ರಾಮಮಟ್ಟದ ಜನಪ್ರತಿನಿಗಳು ಆಗಿದ್ದಾರೆ. ರಾಜಕೀಯರಹಿತವಾಗಿ ಯೋಚನೆ ಮಾಡಬೇಕಾದ ಕಾಲ ಇಂದು ಬಂದಿದೆ. ಸ್ನೇಹಮಯಿಯಾಗಿದ್ದ ಜಲೀಲ್ ಹತ್ಯೆಯಿಂದ ಇಂದು ಎಲ್ಲ ಗ್ರಾಮಮಟ್ಟದ ಜನಪ್ರತಿನಿಗಳು ಭೀತಿಗೊಳಗಾಗಿದ್ದು, ಕರ್ತವ್ಯ ನಿರ್ವಹಿಸಲು ಆತಂಕಪಡುವಂತಾಗಿದೆ ಎಂದರು.

ಜಿಲ್ಲಾ ಒಕ್ಕೂಟ ಕಾರ್ಯದರ್ಶಿ ಸದಾನಂದ ಪೂಜಾರಿ ಜಲೀಲ್ ಅವರು ಜಿಲ್ಲಾ ಸಂಘಟನೆಯಲ್ಲೂ ಸಕ್ರಿಯರಾಗಿದ್ದರು ಎಂದು ಸ್ಮರಿಸಿದರು.

ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಮೌನಪ್ರಾರ್ಥನೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡಿನಲ್ಲಿ ಜಲೀಲ್ ಕರೋಪಾಡಿ ಸಂತಾಪ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*