ಬಂಟ್ವಾಳ

ಅಪೂರ್ಣ ಕಾಮಗಾರಿ: ಎಸ್.ಡಿ.ಪಿ.ಐ 15 ದಿನಗಳ ಗಡುವು

ರಾಷ್ಟ್ರೀಯ ಹೆದ್ದಾರಿ 75ರ ರಾಜ ರಸ್ತೆ ಕೈಕಂಬ ಮತ್ತು ಬಿ.ಸಿ.ರೋಡಿನ ಇಕ್ಕೆಲೆಗಳಲ್ಲಿ ಅಗೆದು ಅರ್ಧದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಗುರುವಾರ ಮನವಿ ಸಲ್ಲಿಸಿದ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ 15 ದಿನಗಳ ಗಡುವು ವಿಧಿಸಿದೆ.

ಜಾಹೀರಾತು

ಕೈಕಂಬದಲ್ಲಿ ಬಸ್‌ಬೇ ಹಾಗೂ ಅಗಲೀಕರಣದ ನೆಪದಲ್ಲಿ ರಸ್ತೆಯ ಎರಡೂ ಬದಿಯನ್ನು ಅಗೆದು ಹಾಕಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ಇನ್ನು ಕೂಡಾ ಅಗೆದ ಹೊಂಡವನ್ನು ತುಂಬಿಸಿ ಸುಸ್ಥಿತಿಗೆ ತರುವ ಕೆಲಸ ಮಾಡಿರುವುದಿಲ್ಲ. ಪರಿಣಾಮ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಸರಿಸುಮಾರು ಒಂದು ವರ್ಷ ಸಮೀಪಿಸುತ್ತಿದೆ. ಬುಧವಾರ ಸುರಿದ ಮಳೆಗೆ ಇಲ್ಲಿನ ಅಂಗಡಿಗಳಿಗೆ ನೀರು ನುಗ್ಗಿ ಮತ್ತೊಂದು ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಹಾಗೆಯೇ ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿ ಚರಂಡಿ ಕಾಮಗಾರಿಗಾಗಿ ಅಗೆದು ಹಾಕಲಾಗಿದ್ದು ಇದರ ಕಾಮಗಾರಿ ಕೂಡಾ ಆಮೆಗತಿಯಲ್ಲಿ ಸಾಗುತ್ತಿದ್ದು ಪಾದಾಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಎರಡೂ ಕಾಮಗಾರಿಯನ್ನು ೧೫ ದಿನಗಳ ಒಳಗಾಗಿ ಪೂರ್ಣಗೊಳಿಸದಿದ್ದಲ್ಲಿ ಎಸ್‌ಡಿಪಿಐ ಸಾರ್ವಜನಿಕರನ್ನು ಒಟ್ಟುಗೂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಕೆಲವು ಸಮಯದ ಹಿಂದೆ ಕೈಕಂಬದಲ್ಲಿ ಅಗೆದು ಹಾಕಲಾಗಿದ್ದ ರಸ್ತೆಯನ್ನು ಸುಸ್ಥಿತಿಗೆ ತಾರದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರಿಕ್ಷಾ ಚಾಲಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವುದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭದಲ್ಲಿ ತೆಗೆದ ಹೊಂಡಕ್ಕೆ ಮಣ್ಣು ತುಂಬಿಸಿದ್ದರೂ ಕಾಮಗಾರಿ ಇನ್ನೂ ಪೂರ್ತಿಗೊಂಡಿಲ್ಲ. ಇದೀಗ ಮಳೆಯಿಂದಾಗಿ ಮತ್ತೆ ಸಮಸ್ಯೆ ಉದ್ಭವಿಸಿದೆ.

ಜಾಹೀರಾತು

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುರಸಭಾ ಸಮಿತಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮೈನ್ಸ್, ರಿಕ್ಷಾ ಯೂನಿಯನ್ ಅಧ್ಯಕ್ಷ ಯಾಕೂಬ್, ಎಸ್‌ಡಿಪಿಐ ಮುಖಂಡರಾದ ಇಸಾಕ್ ತಲಪಾಡಿ, ಬಶೀರ್ ಮದ್ದ, ನೌಶಾದ್ ಕಲಾಯಿ, ರಿಝ್ವಾನ್ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ