ಬಂಟ್ವಾಳ

ಮಗುಚಿದ ಗ್ರಾನೈಟ್ ಲಾರಿ: ಓರ್ವ ಸಾವು

ಬಂಟ್ವಾಳ ತಾಲುಕಿನ ನೋರ್ಣಡ್ಕ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡದ ಅಪಘಾತದಲ್ಲಿ ಲಾರಿಯೊಂದು ಮಗುಚಿ ಓರ್ವ ಮೃತಪಟ್ಟಿದ್ದಾರೆ.
ಬಿಹಾರ ಮೂಲದ ಮಹೇಶ್ (35) ಸ್ಥಳದಲ್ಲೇ ಸಾವನ್ನಪ್ಪಿದವರು. ಸುನಿಲ್ ಲೋಬೊ ಎಂಬವರ ಮನೆಗೆ ಸುರತ್ಕಲ್‌ನಿಂದ ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಕೆಂಪುಗುಡ್ಡೆಯ ನೋರ್ಣಡ್ಕ ಎಂಬಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಸಂಚಾರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಘಟನೆ ನಡೆದಿದೆ.
ಸುಮಾರು ೨.೩೦ರ ವೇಳೆ ಘಟನೆ ನಡೆದಿದ್ದು, ಈ ಸಂದರ್ಭ ಲಾರಿಯಲ್ಲಿ ದಿನೇಶ್ ಬಾಬು, ಮುಖೇಶ್ ಹಾಗೂ ಚಾಲಕ ರಿಯಾಜ್ ಮತ್ತು ಸುನಿಲ್ ಇದ್ದರು. ಇವರಲ್ಲಿ ಲಾರಿ ಚಾಲಕ ರಿಯಾಝ್ ಸಹಿತ ದಿನೇಶ್, ಬಾಬು, ಮುಖೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಉಳಿದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಮೃತಪಟ್ಟ ಮಹೇಶ್ ಲಾರಿಯ ಹಿಂಬದಿಯಲ್ಲಿ ಗ್ರಾನೈಡ್‌ಗಳ ಮೇಲೆ ಕುಳಿತಿದ್ದ. ಪಲ್ಟಿಯಾಗುವ ರಭಸಕ್ಕೆ ಗ್ರಾನೈಡ್‌ಗಳು ಅವರ ಮೈಮೇಲೆ ಬಿದ್ದಿದೆ ಎನ್ನಲಾಗಿದೆ. ಗ್ರಾನೈಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಅನ್‌ಲೋಡ್ ಮಾಡಲೆಂದು ಲಾರಿಯಲ್ಲಿ ಬೆಂಜನಪದವಿಗೆ ಬಂದಿದ್ದರು. ಘಟನೆಯ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ