ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು

ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ.

ಸರ್ಕಾರಿ ಬಸ್ಸು ವಿಟ್ಲ ಪಟ್ಟಣ ಪಂಚಾಯಿತಿಗೆ ಸೇರಿದ ಹಳೆ ಬಸ್ಸು ನಿಲ್ದಾಣಕ್ಕೆ ಪ್ರವೇಶಿಸಿದೆ ಎಂಬ ಕಾರಣಕ್ಕೆ ಚಾಲಕನಿಗೆ ಹಲ್ಲೆ ನಡೆಸಿದ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಬಸ್ ಚಾಲಕ ಹನುಮಂತ ಗೌಡರ್ ಹಲ್ಲೆಗೊಳಗಾಗಿದ್ದು, ನಿವಾಹಕ ಶರಣಪ್ಪ ಅವರು ಜತೆಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಉಪನಿರೀಕ್ಷಕ ನಾಗರಾಜ್ ಅವರು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

ಕೆ.ಎಸ್.ಆರ್.ಟಿ.ಸಿ. ಬಿ. ಸಿ. ರೋಡ್ ಘಟಕದ ಮಂಗಳೂರು – ವಿಟ್ಲ – ಪೆರುವಾಯಿ – ಪಕಳಕುಂಜ ಸಂಪರ್ಕಿಸುವ ಬಸ್ಸು ವಿಟ್ಲಕ್ಕೆ ಆಗಮಿಸಿದ್ದು, ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿಲ್ಲುವ ಜನರನ್ನು ಹತ್ತಿಸಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ರಸ್ತೆಗೆ ಹೋದ ಚಾಲಕ ಊರಿಗೆ ಹೊಸಬನಾಗಿದ್ದಾನೆ. ಸಮಯ ಮೀರಿದೆ ಎಂದು ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ತಿರುಗಿಸಲು ಬೇಕಾದ ಸ್ಥಳಾವಕಾಶ ಸಿಕ್ಕಿದ್ದರಿಂದ ಅಲ್ಲೇ ತಿರುಗಿಸಲು ಮುಂದಾಗಿದ್ದನ್ನು ಆಕ್ಷೇಪಿಸಿ ಹಲ್ಲೆ ನಡೆಸಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದ್ದುದರಿಂದ ಪರಿಸ್ಥಿತಿ ನಿಭಾಯಿಸಿದ್ದಾರೆ.  ಆದರೆ ಬಳಿಕ ಖಾಸಗಿ ಬಸ್ ಚಾಲಕರು ಪ್ರಕರಣ ದಾಖಲಿಸಿದ್ದನ್ನು ಹಿಂತೆಗೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಮುಂದಾದರು. ಬಳಿಕ ವೃತ್ತನಿರೀಕ್ಷಕ ಮಂಜಯ್ಯ ಸ್ಥಳಕ್ಕೆ ಆಗಮಿಸಿ ಮಾತುಕತೆ ನಡೆಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*