ವಿಟ್ಲ

ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು

ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ.

ಸರ್ಕಾರಿ ಬಸ್ಸು ವಿಟ್ಲ ಪಟ್ಟಣ ಪಂಚಾಯಿತಿಗೆ ಸೇರಿದ ಹಳೆ ಬಸ್ಸು ನಿಲ್ದಾಣಕ್ಕೆ ಪ್ರವೇಶಿಸಿದೆ ಎಂಬ ಕಾರಣಕ್ಕೆ ಚಾಲಕನಿಗೆ ಹಲ್ಲೆ ನಡೆಸಿದ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಬಸ್ ಚಾಲಕ ಹನುಮಂತ ಗೌಡರ್ ಹಲ್ಲೆಗೊಳಗಾಗಿದ್ದು, ನಿವಾಹಕ ಶರಣಪ್ಪ ಅವರು ಜತೆಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಉಪನಿರೀಕ್ಷಕ ನಾಗರಾಜ್ ಅವರು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

ಕೆ.ಎಸ್.ಆರ್.ಟಿ.ಸಿ. ಬಿ. ಸಿ. ರೋಡ್ ಘಟಕದ ಮಂಗಳೂರು – ವಿಟ್ಲ – ಪೆರುವಾಯಿ – ಪಕಳಕುಂಜ ಸಂಪರ್ಕಿಸುವ ಬಸ್ಸು ವಿಟ್ಲಕ್ಕೆ ಆಗಮಿಸಿದ್ದು, ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿಲ್ಲುವ ಜನರನ್ನು ಹತ್ತಿಸಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ರಸ್ತೆಗೆ ಹೋದ ಚಾಲಕ ಊರಿಗೆ ಹೊಸಬನಾಗಿದ್ದಾನೆ. ಸಮಯ ಮೀರಿದೆ ಎಂದು ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ತಿರುಗಿಸಲು ಬೇಕಾದ ಸ್ಥಳಾವಕಾಶ ಸಿಕ್ಕಿದ್ದರಿಂದ ಅಲ್ಲೇ ತಿರುಗಿಸಲು ಮುಂದಾಗಿದ್ದನ್ನು ಆಕ್ಷೇಪಿಸಿ ಹಲ್ಲೆ ನಡೆಸಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದ್ದುದರಿಂದ ಪರಿಸ್ಥಿತಿ ನಿಭಾಯಿಸಿದ್ದಾರೆ.  ಆದರೆ ಬಳಿಕ ಖಾಸಗಿ ಬಸ್ ಚಾಲಕರು ಪ್ರಕರಣ ದಾಖಲಿಸಿದ್ದನ್ನು ಹಿಂತೆಗೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಮುಂದಾದರು. ಬಳಿಕ ವೃತ್ತನಿರೀಕ್ಷಕ ಮಂಜಯ್ಯ ಸ್ಥಳಕ್ಕೆ ಆಗಮಿಸಿ ಮಾತುಕತೆ ನಡೆಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts