ಬಂಟ್ವಾಳ

ರಾಮಕೃಷ್ಣ ಮಿಷನ್ ನಿಂದ ಸ್ವಚ್ಛ ಬಂಟ್ವಾಳ ಅಭಿಯಾನ ಆರಂಭ

ಜಾಹೀರಾತು

ಸ್ವಚ್ಛ ಭಾರತ ರಾಷ್ಟ್ರಪಿತ ಗಾಂಧೀಜಿಯವರ ಕಲ್ಪನೆ ಈ ಕಲ್ಪನೆಯನ್ನು ಸಾಕಾರಗೊಳಿಸಲು  ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ರಾಷ್ಟ್ರಕ್ಕೆ ಕರೆ ಕೊಟ್ಟರು. ಈ ಬೃಹತ್ ಅಭಿಯಾನವನ್ನು ಯಶಸ್ವಿಯಾಗಿಸಲು ಕೇಂದ್ರ ಸರಕಾರದ ವಿಶೇಷ ಮನವಿಯ ಮೇರೆಗೆ ರಾಮಕೃಷ್ಣ ಮಿಷನ್ ಈ ಅಭಿಯಾನಕ್ಕೆ ಕೈ ಜೋಡಿಸಿತು. ಈ ನಿಟ್ಟಿನಲ್ಲಿ ಮಂಗಳೂರಿನ ಮಿಷನ್ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಎಂಬ ಬೃಹತ್ ಅಭಿಯಾನವನ್ನು ಆರಂಭಿಸಿತು. ಈ ಅಭಿಯಾನವು ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ ಪುತ್ತೂರಿನಲ್ಲಿ ಸ್ವಚ್ಛ ಪುತ್ತೂರು ಹಾಗೂ ಕಲ್ಲಡ್ಕದಲ್ಲಿ ಸ್ವಚ್ಛ ಕಲ್ಲಡ್ಕ ಎಂಬ ಮತ್ತೆರಡು ಯಶಸ್ವಿ ಅಭಿಯಾನಗಳು ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಆರಂಭವಾಯಿತು.

ಈ ಅಭಿಯಾನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಎಂಬಂತೆ ದಕ್ಷಿಣ ಕನ್ನಡದ ಜೀವನದಿಯಾದ ನೇತ್ರಾವತಿಯ ತಟದಲ್ಲಿರುವ ಬಂಟ್ವಾಳದಲ್ಲಿ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಸ್ವಚ್ಛ ಬಂಟ್ವಾಳ ಎಂಬ ಅಭಿಯಾನವನ್ನು ಆರಂಭಿಸಲಾಯಿತು.

ಈ ಅಭಿಯಾನವನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹರಾಜ್ ಹಾಗೂ ಬಂಟ್ವಾಳ ಪುರಸಭೆ ಅಧ್ಯಕ್ಷರಾದ ರಾಮಕೃಷ್ಣ ಆಳ್ವ ಅವರು ಬಿ. ಸಿ ರೋಡ್ ನ ರಕ್ತೇಶ್ವರಿ ಗುಡಿಯ ಮುಂಭಾಗದಲ್ಲಿ ನಿಶಾನೆ ತೋರುವುದರ ಮೂಲಕ ಉದ್ಘಾಟಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.