ಬಂಟ್ವಾಳ

ರಾಮಕೃಷ್ಣ ಮಿಷನ್ ನಿಂದ ಸ್ವಚ್ಛ ಬಂಟ್ವಾಳ ಅಭಿಯಾನ ಆರಂಭ

ಜಾಹೀರಾತು

ಸ್ವಚ್ಛ ಭಾರತ ರಾಷ್ಟ್ರಪಿತ ಗಾಂಧೀಜಿಯವರ ಕಲ್ಪನೆ ಈ ಕಲ್ಪನೆಯನ್ನು ಸಾಕಾರಗೊಳಿಸಲು  ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ರಾಷ್ಟ್ರಕ್ಕೆ ಕರೆ ಕೊಟ್ಟರು. ಈ ಬೃಹತ್ ಅಭಿಯಾನವನ್ನು ಯಶಸ್ವಿಯಾಗಿಸಲು ಕೇಂದ್ರ ಸರಕಾರದ ವಿಶೇಷ ಮನವಿಯ ಮೇರೆಗೆ ರಾಮಕೃಷ್ಣ ಮಿಷನ್ ಈ ಅಭಿಯಾನಕ್ಕೆ ಕೈ ಜೋಡಿಸಿತು. ಈ ನಿಟ್ಟಿನಲ್ಲಿ ಮಂಗಳೂರಿನ ಮಿಷನ್ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಎಂಬ ಬೃಹತ್ ಅಭಿಯಾನವನ್ನು ಆರಂಭಿಸಿತು. ಈ ಅಭಿಯಾನವು ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ ಪುತ್ತೂರಿನಲ್ಲಿ ಸ್ವಚ್ಛ ಪುತ್ತೂರು ಹಾಗೂ ಕಲ್ಲಡ್ಕದಲ್ಲಿ ಸ್ವಚ್ಛ ಕಲ್ಲಡ್ಕ ಎಂಬ ಮತ್ತೆರಡು ಯಶಸ್ವಿ ಅಭಿಯಾನಗಳು ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಆರಂಭವಾಯಿತು.

ಜಾಹೀರಾತು

ಈ ಅಭಿಯಾನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಎಂಬಂತೆ ದಕ್ಷಿಣ ಕನ್ನಡದ ಜೀವನದಿಯಾದ ನೇತ್ರಾವತಿಯ ತಟದಲ್ಲಿರುವ ಬಂಟ್ವಾಳದಲ್ಲಿ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಸ್ವಚ್ಛ ಬಂಟ್ವಾಳ ಎಂಬ ಅಭಿಯಾನವನ್ನು ಆರಂಭಿಸಲಾಯಿತು.

ಈ ಅಭಿಯಾನವನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹರಾಜ್ ಹಾಗೂ ಬಂಟ್ವಾಳ ಪುರಸಭೆ ಅಧ್ಯಕ್ಷರಾದ ರಾಮಕೃಷ್ಣ ಆಳ್ವ ಅವರು ಬಿ. ಸಿ ರೋಡ್ ನ ರಕ್ತೇಶ್ವರಿ ಗುಡಿಯ ಮುಂಭಾಗದಲ್ಲಿ ನಿಶಾನೆ ತೋರುವುದರ ಮೂಲಕ ಉದ್ಘಾಟಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ