ಜಿಲ್ಲಾ ಸುದ್ದಿ

ರಸ್ತೆ ಬದಿ ಕಸ ಎಸೆದರೆ ಪೊಲೀಸ್ ಕೇಸು, ವಾಹನದ ಲೈಸನ್ಸ್ ರದ್ದು

bantwalnews.com

ಇನ್ನು ಕಾರಿನಲ್ಲಿ ಬಂದು ಅಥವಾ ಯಾವುದೇ ವಾಹನದಲ್ಲಿ ಸಂಚರಿಸುವಾಗ ಇಲ್ಲವೇ ನಡೆದುಕೊಂಡು ಹೋಗುವಾಗಲಾದರೂ ರಸ್ತೆ ಬದಿಯಲ್ಲಿ ಕಸ ಎಸೆಯಬೇಕು ಎಂಬ ಹಂಬಲ ನಿಮ್ಮ ಮನಸ್ಸಿನಲ್ಲಿದ್ದರೆ ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಇಲ್ಲವಾದರೆ ಪೊಲೀಸ್ ಕೇಸ್ ಎದುರಿಸಬೇಕಾದೀತು ಅಥವಾ ನಿಮ್ಮ ವಾಹನ ಲೈಸೆನ್ಸ್ ರದ್ದಾದೀತು.

ಜಾಹೀರಾತು

ದ.ಕ ಜಿಲ್ಲೆಯಾದ್ಯಂತ ರಾಷ್ಟ್ರೀಯ/ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಕಸದ ರಾಶಿಯನ್ನು ತಂದು ಸುರಿಯುತ್ತಿರುವುದನ್ನು ನಿಯಂತ್ರಿಸಲು ನಿಯಮಾನುಸಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ನಿರ್ದೇಶನ ನೀಡಿದ್ದಾರೆ.

ಜಾಹೀರಾತು

ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ/ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಕಸದ ರಾಶಿಯನ್ನು ಹಾಕುವ ಪ್ರದೇಶದಲ್ಲಿ ಸಿ.ಸಿ ಕ್ಯಾಮರವನ್ನು ಅಳವಡಿಸಬೇಕು. ಹಗಲು ಮತ್ತು ರಾತ್ರಿ ಹೊತ್ತು ಗಸ್ತು ತಿರುಗಲು ಕಾವಲು ಪಡೆ ತಂಡವನ್ನು ರಚಿಸಬೇಕು. ಕಸತಂದು ಸುರಿಯುವ ವಾಹನದ ಮಾಲೀಕರ ಮೇಲೆ ಪೋಲಿಸ್ ಠಾಣೆಗೆ ದೂರು ದಾಖಲಿಸಬೇಕು. ವಾಹನದ ನೋಂದಣಿ ರದ್ದು ಪಡಿಸಲು ವಾಹನದ ಮಾಲೀಕರ ವಿರುದ್ಧ ಪ್ರಾದೇಶಿಕ ಸಾರಿಗೆ ಇಲಾಖೆಗೆ ದೂರು ದಾಖಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ನೆರವು ಘಟಕದ ಸಮಾಲೋಚಕರು ಗ್ರಾಮ ಪಂಚಾಯತ್‍ಗಳಿಗೆ ನಿರಂತರ ಭೇಟಿ ನೀಡಿ ಆಗುತ್ತಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ