ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ ಗುರುವಾರ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ 12 ಅಡಿ ಎತ್ತರದ ಶಿವನ ಮೂರ್ತಿ ಲೋಕಾರ್ಪಣೆ ಮಾಡಿದರೆ, ಜಿಪಂ ಮಾಜಿ ಅಧ್ಯಕ್ಷ ಬರಂಗರೆ ಸದಾನಂದ ಪೂಂಜ ತ್ರಿಶೂಲ ಸ್ತಂಭ, ಜಿಪಂ ಸದಸ್ಯ ರವೀಂದ್ರ ಕಂಬಳಿ ಪ್ರಕೃತಿ ವೀಕ್ಷಣಾ ಕೇಂದ್ರವನ್ನು ಹಾಗೂ ಬಿಜೆಪಿ ನಾಯಕ ರಾಜಗೋಪಾಲ ರೈ ಸತ್ಯಹರಿಶ್ಚಂದ್ರನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

ಜಾಹೀರಾತು


ಈ ಸಂದರ್ಭ ಮಾತನಾಡಿದ ಡಾ. ಭಟ್, ಭಾರತೀಯರು ಸಾವಿಗೆ ಹೆದರುವವರಲ್ಲ. ಹುಟ್ಟಿನಿಂದ ಸಾವಿನವರೆಗಿನ ಸಂಸ್ಕಾರವನ್ನು ಪಡೆಯುತ್ತಾರೆ. ಇದನ್ನು ಉಳಿಸುವ ಕೆಲಸವನ್ನು ಮಾಡಬೇಕು. ಈ ನಿಟ್ಟಿನಲ್ಲಿ ರುದ್ರಭೂಮಿ ದೇವಭೂಮಿಯಂತಾಗಿ ಮಾರ್ಪಾಟಾಗಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾನಂದ ಪೂಂಜ ಮಾತನಾಡಿ, ಹುಟ್ಟಿನಿಂದ ಸಾವಿನವರೆಗಿನ ಜನ್ಮದಲ್ಲಿ ಉತ್ತಮ ಕಾರ್ಯ ನಡೆಸಬೇಕು ಎಂದು ಹೇಳಿದರು. ಜಿಪಂ ಸದಸ್ಯ ರವೀಂದ್ರ ಕಂಬಳಿ 1 ಲಕ್ಷ ರೂ ಅನುದಾನವನ್ನು ಘೋಷಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ರೂವಾರಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಸಜೀಪನಡು, ಸಜೀಪಪಡು, ಸಜೀಪಮೂಡ, ಸಜೀಪಮುನ್ನೂರು, ಚೇಳೂರು, ಇರಾ, ಮಂಚಿ ಗ್ರಾಮಗಳಿಗೆ ಸಂಬಂದಿಸಿದಂತೆ ಈ ರುದ್ರಭೂಮಿ ಇದೆ ಎಂದು ಹೇಳಿದರು.


ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಮುಳ್ಳುಂಜ ವೆಂಕಟೇಶ್ವರ ಭಟ್, ಹಿಂದು ಸಂಘಟನೆಗಳ ಪ್ರಮುಖರಾದ ಶಿವಾನಂದ ಮೆಂಡನ್, ಪ್ರವೀಣ್ ಕುತ್ತಾರ್, ಉದ್ಯಮಿ ಸದಾಶಿವ ಶೆಟ್ಟಿ ತಲೆಮೊಗರು, ನವೀನ್ ಸುವರ್ಣ ಮಿತ್ತಕಟ್ಟ ಉಪಸ್ಥಿತರಿದ್ದರು. ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ದೇವದಾಸ ಅಡಪ ಸ್ವಾಗತಿಸಿದರು. ಪ್ರಮುಖರಾದ ನಾಗೇಶ ಪೂಜಾರಿ ಕುರಿಯಾಡಿ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

for Video:

also read:

ಜಾಹೀರಾತು

ಪ್ರೀತಿ, ವಿಶ್ವಾಸದಿಂದ ಜನರ ಮನಸ್ಸು ಗೆಲ್ಲಿ: ಯು.ಟಿ.ಖಾದರ್

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*