ಬಂಟ್ವಾಳ

ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ದೇವಭೂಮಿ ಮಾದರಿಯಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ ಗುರುವಾರ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ 12 ಅಡಿ ಎತ್ತರದ ಶಿವನ ಮೂರ್ತಿ ಲೋಕಾರ್ಪಣೆ ಮಾಡಿದರೆ, ಜಿಪಂ ಮಾಜಿ ಅಧ್ಯಕ್ಷ ಬರಂಗರೆ ಸದಾನಂದ ಪೂಂಜ ತ್ರಿಶೂಲ ಸ್ತಂಭ, ಜಿಪಂ ಸದಸ್ಯ ರವೀಂದ್ರ ಕಂಬಳಿ ಪ್ರಕೃತಿ ವೀಕ್ಷಣಾ ಕೇಂದ್ರವನ್ನು ಹಾಗೂ ಬಿಜೆಪಿ ನಾಯಕ ರಾಜಗೋಪಾಲ ರೈ ಸತ್ಯಹರಿಶ್ಚಂದ್ರನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

ಜಾಹೀರಾತು


ಈ ಸಂದರ್ಭ ಮಾತನಾಡಿದ ಡಾ. ಭಟ್, ಭಾರತೀಯರು ಸಾವಿಗೆ ಹೆದರುವವರಲ್ಲ. ಹುಟ್ಟಿನಿಂದ ಸಾವಿನವರೆಗಿನ ಸಂಸ್ಕಾರವನ್ನು ಪಡೆಯುತ್ತಾರೆ. ಇದನ್ನು ಉಳಿಸುವ ಕೆಲಸವನ್ನು ಮಾಡಬೇಕು. ಈ ನಿಟ್ಟಿನಲ್ಲಿ ರುದ್ರಭೂಮಿ ದೇವಭೂಮಿಯಂತಾಗಿ ಮಾರ್ಪಾಟಾಗಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾನಂದ ಪೂಂಜ ಮಾತನಾಡಿ, ಹುಟ್ಟಿನಿಂದ ಸಾವಿನವರೆಗಿನ ಜನ್ಮದಲ್ಲಿ ಉತ್ತಮ ಕಾರ್ಯ ನಡೆಸಬೇಕು ಎಂದು ಹೇಳಿದರು. ಜಿಪಂ ಸದಸ್ಯ ರವೀಂದ್ರ ಕಂಬಳಿ 1 ಲಕ್ಷ ರೂ ಅನುದಾನವನ್ನು ಘೋಷಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ರೂವಾರಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಸಜೀಪನಡು, ಸಜೀಪಪಡು, ಸಜೀಪಮೂಡ, ಸಜೀಪಮುನ್ನೂರು, ಚೇಳೂರು, ಇರಾ, ಮಂಚಿ ಗ್ರಾಮಗಳಿಗೆ ಸಂಬಂದಿಸಿದಂತೆ ಈ ರುದ್ರಭೂಮಿ ಇದೆ ಎಂದು ಹೇಳಿದರು.


ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮೊಕ್ತೇಸರ ಮುಳ್ಳುಂಜ ವೆಂಕಟೇಶ್ವರ ಭಟ್, ಹಿಂದು ಸಂಘಟನೆಗಳ ಪ್ರಮುಖರಾದ ಶಿವಾನಂದ ಮೆಂಡನ್, ಪ್ರವೀಣ್ ಕುತ್ತಾರ್, ಉದ್ಯಮಿ ಸದಾಶಿವ ಶೆಟ್ಟಿ ತಲೆಮೊಗರು, ನವೀನ್ ಸುವರ್ಣ ಮಿತ್ತಕಟ್ಟ ಉಪಸ್ಥಿತರಿದ್ದರು. ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ದೇವದಾಸ ಅಡಪ ಸ್ವಾಗತಿಸಿದರು. ಪ್ರಮುಖರಾದ ನಾಗೇಶ ಪೂಜಾರಿ ಕುರಿಯಾಡಿ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

for Video:

also read:

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts