ಫರಂಗಿಪೇಟೆ

ಗಾಂಜ ವ್ಯಸನಿಗಳಿಂದ ದಲಿತ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಕ್ಯಾಂಪಸ್ ಫ್ರಂಟ್ ಖಂಡನೆ

ಗಾಂಜ ಸೇದುವಂತೆ ಒತ್ತಾಯಿಸಿದಾಗ ನಿರಾಕರಿಸಿದ್ದಕ್ಕೆ ಬುದ್ದಿಮಾಂದ್ಯ ವಿದ್ಯಾರ್ಥಿ ಸಹಿತ ದಲಿತ ವಿದ್ಯಾರ್ಥಿಗಳ ಮೇಲಿನ ಅಮಾನವೀಯ ಹಲ್ಲೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯು ತೀವ್ರವಾಗಿ ಖಂಡಿಸಿದೆ. ಮಾರಿಪಳ್ಳದ ಕುಮಡೇಲು ನಿವಾಸಿಗಳಾದ ಸುಮಂತ್(16) ಹಾಗೂ ಸುಶಾಂತ್(14) ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಮಕ್ಕಳು ಕಲಿಯುವ ಪವಿತ್ರ ಸ್ಥಳವಾದ ಶಾಲೆಯ ಆವರಣದಲ್ಲೆ ಈ ನೀಚ ಕೃತ್ಯ ನಡೆದದ್ದು ವಿಪರ್ಯಾಸ, ಮಾರಿಪಳ್ಳದಲ್ಲಿ ಅನೇಕ ವಿದ್ಯಾರ್ಥಿಗಳು ಗಾಂಜ ಚಟಕ್ಕೆ ಬಲಿಯಾಗುತ್ತಿದ್ದು ಈಗ ವಿದ್ಯಾರ್ಥಿಗಳ ಮೇಲೆ ಗಾಂಜ ವ್ಯಸನಿಗಳ ಹಲ್ಲೆಯು ತೀವ್ರ ಆತಂಕಕಾರಿ ಘಟನೆಯಾಗಿದ್ದು ಮುಂದೆ ವಿದ್ಯಾರ್ಥಿಗಳ ಶ್ಯೆಕ್ಷಣಿಕ ಅಭಿವೃದ್ಧಿಗೆ ಘಟನೆಯು ಮಾರಕವಾಗಿದ್ದು ಕೂಡಲೇ ಪೋಲೀಸ್ ಇಲಾಖೆಯು ಮಧ್ಯ ಪ್ರವೇಶಿಸಿ ಇಲ್ಲಿನ ಗಾಂಜ ಮೂಲವನ್ನು ಪತ್ತೆ ಹಚ್ಚಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಲ್ಪಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕ್ಯಾಂಪಸ್ ಫ್ರಂಟ್ ಇದರ ವಿರುದ್ಧ ಉಗ್ರ ಹೋರಾಟ ನಡೆಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ