ಬಂಟ್ವಾಳ

ಪ್ರೀತಿ, ವಿಶ್ವಾಸದಿಂದ ಜನರ ಮನಸ್ಸು ಗೆಲ್ಲಿ: ಯು.ಟಿ.ಖಾದರ್

ಮನುಷ್ಯ ತಾನು ಸತ್ತಾಗ ಎಷ್ಟು ಹಣ ಸಂಪಾದನೆ ಮಾಡಿದ್ದಾನೆ ಎನ್ನುವುದಕ್ಕಿಂತ ಎಷ್ಟು ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾನೆ ಎನ್ನುವುದು ಮುಖ್ಯವಾಗುತ್ತದೆ. ದ್ವೇಷ ಸಾಧನೆ ಮಾಡುವ ಬದಲು ಪ್ರೀತಿ ಗಳಿಕೆಯಿಂದ ಜನರ ಮನ ಗೆಲ್ಲಲು ಸಾಧ್ಯವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.


ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿ ಹಾಗೂ ಅಭಿವೃದ್ದಿ ಸಮಿತಿ ಕಂಚಿನಡ್ಕ ಪದವು ಇದರ ವತಿಯಿಂದ ಸಜೀಪನಡು ಕಂಚಿನಡ್ಕ ಪದವಿನಲ್ಲಿ ನಡೆದ ಹಿಂದೂ ರುದ್ರಭೂಮಿ ಲೋಕಾರ್ಪಣ ಸಮಾರಂಭದ ಸಭಾ ಕಾರ್ಯಕ್ರಮದದಲ್ಲಿ ಭಾಗವಹಿಸಿ ಮಾತನಾಡಿದರು. ಮುಂಬೈ ಉದ್ಯಮಿ ರೋಹಿತ್ ಶೆಟ್ಟಿ ನಗ್ರಿಗುತ್ತು ಸೇವಾ ವಾಹನ ಲೋಕಾರ್ಪಣೆ ಮಾಡಿದರು. ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪಿತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಮಾಜಿ ಸದಸ್ಯ ಎಸ್.ಅಬ್ಬಾಸ್, ತಾ.ಪಂ.ಸದಸ್ಯೆ ಸವಿತಾ ಹೇಮಂತ್ ಕರ್ಕೇರಾ, ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ನಾಸೀರ್, ಪ್ರಗತಿಪರ ಕೃಷಿಕ ಮಹಾಬಲ ರೈ ಬರ್ಕೆಗುತ್ತು, ಶ್ರೀ ಕ್ಷೇ. ಧ ಗ್ರಾ. ಯೋ. ಮುಡಿಪು ವಲಯ ಮೇಲ್ವಿಚಾರಕ ಶಶಿಧರ್, ಜಯಕರ್ನಟಕ ಜಿಲ್ಲಾಧ್ಯಕ್ಷ ಶ್ರೀಕಾಂತ ಶೆಟ್ಟಿ ಹಾಜರಿದ್ದರು.

ಜಾಹೀರಾತು

also read:

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.