ಕಲ್ಲಡ್ಕ

ಪಕ್ಷ ಸಾಧನೆ, ಕಾಂಗ್ರೆಸ್ ವೈಫಲ್ಯ ತಿಳಿಸಲು ಕಾರ್ಯಕರ್ತರಿಗೆ ಕರೆ

ಮಾಣಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಲಾಯಿತು.


ಪಕ್ಷ ಪ್ರಮುಖರಾದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಕೇಂದ್ರ ಸಾಧನೆ ಹಾಗೂ ರಾಜ್ಯದ ವೈಫಲ್ಯವನ್ನು ಜನರಿಗೆ ತಿಳಿಸುವುದು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಸಮರೋಪ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಿದರು.ವೇದಿಕೆಯಲ್ಲಿ ಮಂಡಲದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಾಕ್ಷರಾದ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಜಿಲ್ಲಾ ವಕ್ತಾರರಾದ ವಿಕಾಸ್ ಪುತ್ತೂರು, ಜೀತೇಂದ್ರ ಕೊಟ್ಟಾರಿ, ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.