ರಂಝಾನ್ ತಿಂಗಳ ಪ್ರತೀ ದಿನ ’ದಅವಾ ಸಂಗಮ’

ಬೆಳ್ತಂಗಡಿ ದಾರುಸ್ಸಲಾಂ ದಅವಾ ಕಾಲೇಜಿನ ಪ್ರಥಮ ವಾರ್ಷಿಕದ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಹೊರ ಜಿಲ್ಲೆಯ ಪ್ರಮುಖ ಮಸೀದಿಗಳಲ್ಲಿ ರಂಝಾನ್ ತಿಂಗಳ ಪ್ರತೀ ದಿನ ದಅವಾ ಸಂಗಮಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸಯ್ಯದ್ ಅಲೀ ತಂಙಳ್ ಕರಾವಳಿ ತಿಳಿಸಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ರಂಝಾನ್ ತಿಂಗಳ ಮೂರನೆ ಉಪವಾಸದಂದು ಉಳ್ಳಾಲ ದರ್ಗಾ ಝಿಯಾರತ್‌ನೊಂದಿಗೆ ಪ್ರಾರಂಭಗೊಂಡು ಬೇರೆ ಬೇರೆ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಬಂದರ್, ಮಿತ್ತಬೈಲ್, ಉಪ್ಪಿನಂಗಡಿ, ಕಡಬ, ಪುತ್ತೂರು, ಬೆಳ್ಳಾರೆ, ಮೂಡಬಿದರೆ ಹಾಗೂ ಮೂಡಿಗೆರೆ, ಕಾಸರಗೋಡಿನ ಮಸೀದಿಗಳಲ್ಲಿ ಲುಹರ್ ನಮಾಝ್‌ನ ಬಳಿಕ ಪ್ರಭಾಷಣ ಕಾರ್ಯಕ್ರಮ ನಡೆಯಲಿದೆ. ಮೂರನೆ ಉಪವಾಸದ ಮೊದಲ ದಿನ ಬಂದರ್ ಝೀನತ್ ಬಕ್ಷಾ ಮಸೀದಿಯಲ್ಲಿ ಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು ಕೊನೆಗೆ ಬೆಳ್ತಂಗಡಿಯಲ್ಲಿ ಸಮಾಪ್ತಿಗೊಳ್ಳಲಿದೆ. ಈ ಎಲ್ಲ ಸಮಾರಂಭದಲ್ಲಿ ಸಮಸ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.

ಸಮಸ್ತ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್, ಪಾಣಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್, ಸಯ್ಯದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್, ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಸಹಿತ ಮೊದಲಾದವರು ಈ ಸಂಸ್ಥೆಗೆ ನೇತೃತ್ವ ನೀಡುತ್ತಿದ್ದಾರೆ ಎಂದ ಅವರು ಸಮನ್ವಯ ಶಿಕ್ಷಣದ ಮೂಲಕ ಪವಿತ್ರ ಇಸ್ಲಾಮಿನ ಪ್ರಚಾರ ಹಾಗೂ ಪ್ರಬುದ್ಧ ಉಲಮಾಗಳನ್ನು ಸೃಷ್ಟಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ೬೦ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯ ನಿರ್ವಾಹಕ ಅಧ್ಯಕ್ಷ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಪೋಸೋಟು, ವ್ಯವಸ್ಥಾಪಕ ಬಶೀರ್ ದಾರಿಮಿ, ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ದಾರಿಮಿ ಸವಣೂರು, ಪ್ರೋಫೆಸರ್ ಮುಹಮ್ಮದ್ ಇಸ್ಹಾಕ್ ಕೌಸರಿ, ಹಮೀದ್ ಕಣ್ಣೂರು, ಇಲ್ಯಾಸ್ ಕಕ್ಕಿಂಜೆ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಂಝಾನ್ ತಿಂಗಳ ಪ್ರತೀ ದಿನ ’ದಅವಾ ಸಂಗಮ’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*