ಪಿಲಿಮೊಗರು ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿಗಾಗಿ ಒಂದು ದಿನ, ನೀರಿಗಾಗಿ ಅರಣ್ಯ ಎಂಬ ಯೋಜನೆಯಡಿ ಅರಣ್ಯ ಇಲಾಖೆಯ ಬಂಟ್ವಾಳ ವಲಯ ವತಿಯಿಂದ ಬೀಜದುಂಡೆ ಬಿತ್ತನೆ ಅಭಿಯಾನ ಸೋಮವಾರ ನಡೆಯಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ರಾವ್, ಶಿಕ್ಷಕ ಶೇಖರ್, ಸ್ಥಳೀಯ ಜನಪ್ರತಿನಿಧಿ ಶಾರದಾ, ಉಪವಲಯ ಅರಣ್ಯಾಧಿಕಾರಿ ಅನಿಲ್, ಅರಣ್ಯರಕ್ಷಕಿ ಸ್ಮಿತಾ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸುಮಾರು ಒಂದು ಸಾವಿರ ಬೀಜಗಳನ್ನು ಮಕ್ಕಳಿಗೆ ವಿತರಿಸಿ ಬಿತ್ತನೆ ಅಭಿಯಾನ ನಡೆಸಲಾಯಿತು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)