ಬಂಟ್ವಾಳ

ಸರ್ವೀಸ್ ರಸ್ತೆ ದುರಸ್ತಿ ಆಗ್ರಹಿಸಿ 13ರಂದು ಪ್ರತಿಭಟನೆ

ಬಂಟ್ವಾಳ ಸರ್ವೀಸ್ ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ನಾನಾ ಸಂಘ, ಸಂಸ್ಥೆಗಳು ಜೂನ್ 13ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಲಿವೆ.

ಜಾಹೀರಾತು

ಬಿ.ಸಿ.ರೋಡಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ನಿರ್ಮಾಣಗೊಂಡಂದಿನಿಂದ ಸರ್ವೀಸ್ ರಸ್ತೆ ದುರಸ್ತಿ ಕಂಡಿಲ್ಲ. ರಸ್ತೆ ದುರಸ್ತಿಗಾಗಿ ವಾಹನ ಚಾಲಕರು ಪ್ರತಿಭಟನೆ ನಡೆಸಿದಾಗ ತಕ್ಕಮಟ್ಟಿಗೆ ತೇಪೆ ಹಾಕುತ್ತಾರೆ. ಇದು ಒಂದೇ ದಿನದಲ್ಲಿ ಕೆಟ್ಟು ಹೋಗುತ್ತದೆ. ಸರ್ವೀಸ್ ರಸ್ತೆಯನ್ನು ದುರಸ್ತಿಪಡಿಸುವಂತೆ ವಾಹನ ಚಾಲಕರ ಸಂಘಟನೆಗಳು ಮನವಿ ಕೊಟ್ಟರೂ ಯಾವುದೇ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ. ಆದ್ದರಿಂಧ ರಸ್ತೆ ದುರಸ್ತಿಗಾಗಿ 13ರಂದು ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘ (ಬಿಎಂಎಸ್), ಟೂರಿಸ್ಟ್ ಕಕಾರು ಮತ್ತು ವ್ಯಾನು ಚಾಲಕರ ಸಂಘ, ಬಿ.ಸಿ.ರೋಡ್, ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಚಾಲಕರ ಸಂಘ, ಬಂಟ್ವಾಳ ತಾಲೂಕು, ಸ್ನೇಹಾಂಜಲಿ ಸೇವಾ ಸಂಘ ಅಜ್ಜಿಬೆಟ್ಟು, ಕಟ್ಟೆ ಫ್ರೆಂಡ್ಸ್ ಬಿ.ಸಿ.ರೋಡ್ ಸಾರ್ವಜನಿಕರ ಬೆಂಬಲದೊಂದಿಗೆ 13ರಂದು ಪ್ರತಿಭಟನೆ ನಡೆಸಲಿವೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ