ಜಿಲ್ಲಾ ಸುದ್ದಿ

ಮಳೆ ಜೋರಾದರೆ ರಜೆ ನೀಡುವ ಅಧಿಕಾರ ತಹಶೀಲ್ದಾರ್ ಗೆ

  • ತಾಲೂಕು ಕಂಟ್ರೋಲ್ ರೂಮ್ ನಿರಂತರ ಕಾರ್ಯಾಚರಣೆ – ಅಪರ ಡಿಸಿ ಸೂಚನೆ
  • ಅಪಾಯಕಾರಿ ಮರ ಗುರುತಿಸಿ ಅರಣ್ಯ ಇಲಾಖೆಗೆ ಪಟ್ಟಿ ನೀಡಿ
  • ಸೋಮವಾರ ನಡೆಯಿತು ಡಿ.ಸಿ. ಕಚೇರಿಯಲ್ಲಿ ಪ್ರಾಕೃತಿಕ ವಿಕೋಪಗಳ ನಿರ್ವಹಣೆ ಸಂಬಂಧಿಸಿ ಅಧಿಕಾರಿಗಳ ಸಭೆ
ಮಳೆ ಧಾರಾಕಾರವಾಗಿ ಸುರಿಯಲು ಆರಂಭಿಸಿ ಕೆಲ ದಿನಗಳಾಗಿದ್ದು, ಹಲವೆಡೆ ಜನರು ಸಂಕಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪಗಳ ನಿರ್ವಹಣೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿತು.
ಈ ಸಂದರ್ಭ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲೆಯಲ್ಲಿ ಮಳೆಗಾಲ ತೀವ್ರಗೊಂಡಿರುವುದರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಂಗಳನ್ನು ನಿರಂತರ ಕಾರ್ಯಾಚರಣೆಯಲ್ಲಿರಿಸಬೇಕು ಎಂದು ಸೂಚನೆ ನೀಡಿದರು.
ಮಳೆ ಮತ್ತಿತರ ಪ್ರಾಕೃತಿಕ ಹಾನಿಗಳ ಸಂಬಂಧ ಸಾರ್ವಜನಿಕರ ಸಮಸ್ಯೆಗಳಿಗೆ ಕಂಟ್ರೋಲ್ ರೂಂಗಳಿಗೆ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಬೇಕು.ಕಂಟ್ರೋಲ್ ರೂಂಗೆ ಬರುವ ಎಲ್ಲಾ ದೂರುಗಳನ್ನು ನೋಂದಣಿ ಮಾಡಿ, ರಿಜಿಸ್ಟರ್‍ಗಳನ್ನು ಸಮರ್ಪಕವಾಗಿಡಬೇಕು ಎಂದು ಅವರು ತಿಳಿಸಿದರು.
ನದೀ ಪಾತ್ರದ ಪ್ರದೇಶಗಳು, ಈ ಹಿಂದೆ ನೆರೆ ಕಂಡಿರುವ ಪ್ರದೇಶಗಳ ಮೇಲೆ ನಿಗಾ ಇಡಬೇಕು. ರಸ್ತೆ ಬದಿ ಅಪಾಯಕಾರಿ ಮರಗಳನ್ನು ಗುರುತಿಸಿ ಅರಣ್ಯ ಇಲಾಖೆಗೆ ಪಟ್ಟಿ ನೀಡಬೇಕು. ಮಳೆಯಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿರುವ  ರಸ್ತೆಗಳಲ್ಲಿ ಅಡೆತಡೆ ನಿವಾರಣೆಗೆ ಆದ್ಯತೆ ನೀಡಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅತೀವ ಮಳೆ ಸಂದರ್ಭದಲ್ಲಿ ಶಾಲೆಗಳಿಗೆ ರಜೆ ನಿರ್ಧಾರ ಅಧಿಕಾರವನ್ನು ತಹಶೀಲ್ದಾರ್‍ಗಳಿಗೆ ನೀಡಲಾಗಿದೆ.  ಜಿಲ್ಲೆಯ ಪ್ರಮುಖ ಬೀಚ್‍ಗಳಲ್ಲಿ ಹೋಂಗಾರ್ಡ್‍ಗಳ ನಿರಂತರ ಕಾವಲು ಇರಿಸಬೇಕು. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೋಂಗಾರ್ಡ್, ಅಗ್ನಿಶಾಮಕ ದಳಕ್ಕೆ ಅಗತ್ಯ ಪರಿಕರಗಳನ್ನು ಖರೀದಿಸಲು ಈಗಾಗಲೇ ಅನುದಾನ ನೀಡಲಾಗಿದೆ. ಮಳೆ ಹಾನಿ ಪರಿಹಾರಗಳನ್ನು ತ್ವರಿತವಾಗಿ ಮಂಜೂರು ಮಾಡುವಂತೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಪಾಳು ಬಿದ್ದಿರುವ ಮತ್ತು ನಿಷ್ಕ್ರಿಯ ಕೊಳವೆಬಾವಿಗಳನ್ನು ಪತ್ತೆ ಹಚ್ಚಲು ಬೋರ್‍ವೆಲ್ ಏಜನ್ಸಿಗಳಿಂದಲೇ ಮಾಹಿತಿ ಪಡೆದು ಸಲ್ಲಿಸಲು ಅವರು ಅಂತರ್ಜಲ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.