ಹದಗೆಟ್ಟಿರುವ ಬಿ.ಸಿ.ರೋಡ್ ಸರ್ವೀಸ್ ರೋಡ್: ವಾಹನ ಚಾಲಕ ಮಾಲೀಕರಿಂದ ರಸ್ತೆ ತಡೆ

ಒಂದು ವಾರದೊಳಗೆ ರಸ್ತೆ ದುರಸ್ತಿ ಮಾಡದೇ ಇದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಬಿ.ಸಿ.ರೋಡಿನ ಸರ್ವೀಸ್ ರಸ್ತೆ ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು

ಹದೆಗೆಟ್ಟು ಸಂಚಾರಕ್ಕೂ ಅಯೋಗ್ಯವಾಗಿರುವ ಬಿ.ಸಿ.ರೋಡಿನ ಸರ್ವೀಸ್ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಆಗ್ರಹಿಸಿ ಇಲ್ಲಿನ ರಿಕ್ಷಾ, ಕಾರು, ವ್ಯಾನು ಚಾಲಕರು, ಮಾಲಕರು ಸಾರ್ವಜನಿಕರ ಸಹಕಾರದೊಂದಿಗೆ ಮಂಗಳವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ವಾರದೊಳಗೆ ರಸ್ತೆ ದುರಸ್ಥಿ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಕಾರು ಮತ್ತು ವ್ಯಾನು ಚಾಲಕ – ಮಾಲಕರ ಸಂಘದ ಮುಖಂಡ ಬಿ.ಎಂ.ಪ್ರಭಾಕರ್ ದೈವಗುಡ್ಡೆ , ಬಿರ್ವ ಕುಡ್ಲ ಮುಖಂಡ ನಿತಿನ್ ಮಾತನಾಡಿದರು. ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಟೀಕಾಪ್ರಕಾರಗೈದರಲ್ಲದೆ ಧಿಕ್ಕಾರವನ್ನು ಕೂಗಿದರು. 

ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಬಿ.ಹಸೈನ್ ಪರ್ಲ್ಯ, ಕೃಷ್ಣ ಅಲ್ಲಿಪಾದೆ, ಅಬ್ದುಲ್ ರಝಾಕ್ ಗುಂಪಕಲ್ಲು, ಸದಾನಂದ ನಾವೂರ, ವಕೀಲ ರಾಜೇಶ್ ಬೊಲ್ಲುಕಲ್ಲು ಮಾತನಾಡಿದರು. ರಾಮಚಂದ್ರ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ವಿನ್ಸೆಂಟ್ ರೋಡ್ರಿಗಸ್, ರಾಮ ಕುಲಾಲ್ ಗಾಂದೋಡಿ, ಮೊದಲಾದವರು ಉಪಸ್ಥಿತರಿದ್ದರು. ವಸಂತ್ ಸ್ವಾಗತಿಸಿ ವಂದಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ಸಲ್ಲಿಸಲಾಯತು.

ರಸ್ತೆಗಳು ಹದಗೆಟ್ಟಿರುವ ಕುರಿತು ಬಂಟ್ವಾಳನ್ಯೂಸ್ ಸಹಿತ ಮಾಧ್ಯಮಗಳು ವರದಿಗಳ ಮೂಲಕ ಗಮನ ಸೆಳೆದಿದ್ದವು.

ಪ್ರತಿಭಟನೆಯ ವಿಡಿಯೋ ಲಿಂಕ್ ಇಲ್ಲಿದೆ:

ರಸ್ತೆ ಹದಗೆಟ್ಟಿರುವ ಕುರಿತು ಬಂಟ್ವಾಳನ್ಯೂಸ್ ಮಾಡಿರುವ ವಿಶೇಷ ವರದಿ ಇಲ್ಲಿದೆ:

 

ರಸ್ತೆ ಬದಿ ಸೇಫ್ ಅಲ್ಲ

ಸರ್ವೀಸ್ ರಸ್ತೆ ದುರಸ್ತಿ ಆಗ್ರಹಿಸಿ 13ರಂದು ಪ್ರತಿಭಟನೆ

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹದಗೆಟ್ಟಿರುವ ಬಿ.ಸಿ.ರೋಡ್ ಸರ್ವೀಸ್ ರೋಡ್: ವಾಹನ ಚಾಲಕ ಮಾಲೀಕರಿಂದ ರಸ್ತೆ ತಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*