ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಮಂಚಿ, ಸಜಿಪ ಮೂಡ ಹಾಗೂ ಸಜಿಪ ಮುನ್ನೂರು ಗ್ರಾಮಗಳಿಗೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ಕಂದಾಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದರು.
ಜಾಹೀರಾತು
ಸಾರ್ವಜನಿಕರಿಗೆ ಸರಕಾರದ ಸೇವೆ ಪಡೆಯಲು ಕಂದಾಯ ಅದಾಲತ್ ಅನುಕೂಲ ವ್ಯವಸ್ಥೆ ಕಲ್ಪಿಸಿದ್ದು, ಈ ಯೋಜನೆಯ ಸದುಪಯೋಗ ಸಾರ್ವಜನಿಕರು ಪಡೆಯಬೇಕು ಎಂದು ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಹೇಳಿದರು. ತಾಲೂಕು ಕಚೇರಿ ಸಿಬ್ಬಂದಿಗಳಾದ ಗ್ರೆಟ್ಟಾ ಮಸ್ಕರೇಞಸ್, ರೇಖಾ, ಗ್ರಾಮ ಕರಣಿಕರಾದ ನವೀನ್. ಟಿ,
ಯಶ್ವಿತ ಗ್ರಾಮ ಸಹಾಯಕರಾದ ಸಂಜೀವ, ನವೀನ್ , ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಮೀಳಾ. ಉಪಾಧ್ಯಕ್ಷರಾದ ಮೋಹನ್ ದಾಸ್ ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಚಿಯಲ್ಲಿ ಕಂದಾಯ ಅದಾಲತ್"