ಖಾಸಗಿ ಆಸ್ಪತ್ರೆಗಳು ಮತ್ತು ದವಾಖಾನೆಗಳಲ್ಲಿ ಶುಲ್ಕ ನಿಯಂತ್ರಣ ತರಲು ಉದ್ದೇಶಿಸಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಕ್ರವಾರ ರಾಜ್ಯದ ಬಹುತೇಕ ಖಾಸಗಿ ಆಸ್ಪತ್ರೆಗಳು ಮುಷ್ಕರ ಹೂಡಿದ್ದವು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ, ಇಂಥ ಕ್ರಮ ಕೈಗೊಳ್ಳುವ ಮೊದಲು ತಾವು ಕಳೆದ ಬಾರಿ ಚುನಾವಣಾ ಪ್ರಣಾಳಿಕೆ ಓದಿದ್ದಿರ, ನೀವೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಸಿದ್ದರಾಮಯ್ಯ ಅವರಿಂದ ಪಕ್ಷ ಅವನತಿಯತ್ತ ಸಾಗುತ್ತಿದೆ. ಏಕಪಕ್ಷೀಯ ನಿರ್ಧಾರ ಕೈಗೊಳ್ಳುವ ಮೂಲಕ ಯಾರ ಮಾತನ್ನೂ ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿಜಯ ಕುಮಾರ್ ಶೆಟ್ಟಿ, ಕಳ್ಳಿಗೆ ತಾರಾನಾಥ ಶೆಟ್ಟಿ ಉಪಸ್ಥಿತರಿದ್ದರು.
video link:
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…