ಕಲ್ಲಡ್ಕ

19ರಂದು ಶ್ರೀರಾಮ ಮಂದಿರ ಹನುಮಾನ್ ವಿಗ್ರಹ ಪ್ರತಿಷ್ಠೆ

ಕಲ್ಲಡ್ಕದಲ್ಲಿರುವ ಶ್ರೀರಾಮಮಂದಿರದಲ್ಲಿ ಹನುಮಾನ್ ವಿಗ್ರಹ ಪ್ರತಿಷ್ಠೆ ಜೂನ್ 19ರಂದು ನಡೆಯಲಿದೆ.

ಜಾಹೀರಾತು

ಮಂದಿರದ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಧ್ಯಾನ ಮಂದಿರ ಮತ್ತು 9ಅಡಿ 9ಇಂಚು 9ನೂಲು ಎತ್ತರದ ಹನುಮಾನ್ ವಿಗ್ರಹ ಪ್ರತಿಷ್ಟೆ ಅಂದು ನಡೆಯಲಿರುವುದು. ಬೆಳಿಗ್ಗೆ 7 ರಿಂದ ಗಣಪತಿಹವನ, ಪ್ರತಿಷ್ಠಾಹವನ, 9.10 ಕ್ಕೆ ಹನೂಮಾನ್ ಪ್ರತಿಷ್ಠೆ, ಸಾನಿಧ್ಯ ಕಲಶಾಭಿಷೇಕ, ಪಂಚಾಮೃತಾಭೀಷೇಕ, ಕಲ್ಪೋಕ್ತ ಪೂಜೆ ನಡೆಯಲಿದೆ.

ಅದಾದ ಬಳಿಕ ಬೆಳಗ್ಗೆ 10ಕ್ಕೆ ಸಭಾಕಾರ್‍ಯಕ್ರಮ, *ಧರ್ಮಕೇಸರೀ ಸಭಾ* ನಡೆಯುವುದು. ಈ ಸಂದರ್ಭ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡುವರು.

ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ ಉದ್ಯಮಿಗಳು ಇವರು ಉಪಸ್ಥಿತರಿರುವರು.

ಜಾಹೀರಾತು

10.30 ಕ್ಕೆ ಸಾರ್ವಜನಿಕ ಸಿಯಾಳಾಭಿಷೇಕ, ನಿರಂತರ ಭಜನೆ, 12.30 ರಿಂದ ಅನ್ನಸಂತರ್ಪಣೆ ಹಾಗೂ ಸಂಜೆ 5 ರಿಂದ ತಿಲತೈಲಾಭಿಷೇಕ, ಅಲಂಕಾರ, ಭಜನಾ ಮಂಗಳ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿರುವುದು ಎಂದು ಶ್ರೀರಾಮಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ