ಬಂಟ್ವಾಳ

ಅವಿಭಕ್ತ ಕುಟುಂಬ ಸದಸ್ಯರಿಗೆ ಸನ್ಮಾನ

ಬಿ.ಸಿ.ರೋಡಿನ ಪರಿಸರದಲ್ಲಿ ಹಲವಾರು ವರ್ಷಗಳಿಂದ ಮಾದರಿ ಅವಿಭಕ್ತ ಕುಟುಂಬದ ಜೀವನ ನಡೆಸುತ್ತಿರುವ ಗಣೇಶ್ ಶೆಣೈ ಅವರ ಕುಟುಂಬ ಸದಸ್ಯರಿಗೆ ಸನ್ಮಾನ ಸಮಾರಂಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಕ್ಲಬ್ ಬಂಟ್ವಾಳ ಇಲ್ಲಿ ನಡೆಯಿತು.
ವಿಶ್ವ ಕುಟುಂಬ ದಿನದ ಅಂಗವಾಗಿ ನಡೆದ ಸಭೆಯಲ್ಲಿ ಗಣೇಶ್ ಶೆಣೈ ಅವರ ಮಕ್ಕಳಾದ ಗುರು ದತ್ ಶೆಣೈ, ನಾಗೇಶ್ ಶೆಣೈ, ವಲ್ಲಭೇಶ್ ಶೆಣೈ, ಪಾಂಡುರಂಗ ಶೆಣೈ ದಂಪತಿಗಳಿಗೆ ಸನ್ಮಾನ ವನ್ನು ರೋಟರಿ ಗವರ್ನರ್ ಪ್ರತಿನಿಧಿ ಪ್ರಕಾಶ್ ಕಾರಂತ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಝಕ್ ಅನಂತಾಡಿಯವರು ನೆರವೇರಿಸಿದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ನಿರ್ಮಲ್  ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.