ಬಿ.ಸಿ.ರೋಡಿನ ಪರಿಸರದಲ್ಲಿ ಹಲವಾರು ವರ್ಷಗಳಿಂದ ಮಾದರಿ ಅವಿಭಕ್ತ ಕುಟುಂಬದ ಜೀವನ ನಡೆಸುತ್ತಿರುವ ಗಣೇಶ್ ಶೆಣೈ ಅವರ ಕುಟುಂಬ ಸದಸ್ಯರಿಗೆ ಸನ್ಮಾನ ಸಮಾರಂಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಕ್ಲಬ್ ಬಂಟ್ವಾಳ ಇಲ್ಲಿ ನಡೆಯಿತು.
ವಿಶ್ವ ಕುಟುಂಬ ದಿನದ ಅಂಗವಾಗಿ ನಡೆದ ಸಭೆಯಲ್ಲಿ ಗಣೇಶ್ ಶೆಣೈ ಅವರ ಮಕ್ಕಳಾದ ಗುರು ದತ್ ಶೆಣೈ, ನಾಗೇಶ್ ಶೆಣೈ, ವಲ್ಲಭೇಶ್ ಶೆಣೈ, ಪಾಂಡುರಂಗ ಶೆಣೈ ದಂಪತಿಗಳಿಗೆ ಸನ್ಮಾನ ವನ್ನು ರೋಟರಿ ಗವರ್ನರ್ ಪ್ರತಿನಿಧಿ ಪ್ರಕಾಶ್ ಕಾರಂತ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಝಕ್ ಅನಂತಾಡಿಯವರು ನೆರವೇರಿಸಿದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ನಿರ್ಮಲ್ ಧನ್ಯವಾದ ಸಮರ್ಪಣೆ ಮಾಡಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…