ಬಂಟ್ವಾಳ

ಅವಿಭಕ್ತ ಕುಟುಂಬ ಸದಸ್ಯರಿಗೆ ಸನ್ಮಾನ

ಬಿ.ಸಿ.ರೋಡಿನ ಪರಿಸರದಲ್ಲಿ ಹಲವಾರು ವರ್ಷಗಳಿಂದ ಮಾದರಿ ಅವಿಭಕ್ತ ಕುಟುಂಬದ ಜೀವನ ನಡೆಸುತ್ತಿರುವ ಗಣೇಶ್ ಶೆಣೈ ಅವರ ಕುಟುಂಬ ಸದಸ್ಯರಿಗೆ ಸನ್ಮಾನ ಸಮಾರಂಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಕ್ಲಬ್ ಬಂಟ್ವಾಳ ಇಲ್ಲಿ ನಡೆಯಿತು.
ವಿಶ್ವ ಕುಟುಂಬ ದಿನದ ಅಂಗವಾಗಿ ನಡೆದ ಸಭೆಯಲ್ಲಿ ಗಣೇಶ್ ಶೆಣೈ ಅವರ ಮಕ್ಕಳಾದ ಗುರು ದತ್ ಶೆಣೈ, ನಾಗೇಶ್ ಶೆಣೈ, ವಲ್ಲಭೇಶ್ ಶೆಣೈ, ಪಾಂಡುರಂಗ ಶೆಣೈ ದಂಪತಿಗಳಿಗೆ ಸನ್ಮಾನ ವನ್ನು ರೋಟರಿ ಗವರ್ನರ್ ಪ್ರತಿನಿಧಿ ಪ್ರಕಾಶ್ ಕಾರಂತ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಝಕ್ ಅನಂತಾಡಿಯವರು ನೆರವೇರಿಸಿದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ನಿರ್ಮಲ್  ಧನ್ಯವಾದ ಸಮರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ