ಸುಜಿತ್ ಬಂಗೇರ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಜೂನ್ 17ರಂದು ಪ್ರಚೋದನಕಾರಿ ಸಂದೇಶ ಪ್ರಸಾರ ಮಾಡಿದ ಕುರಿತು ಹಾಗೂ ಉಸ್ಮಾನ್ ಅಭಿಮಾನಿಗಳ ಬಳಗ ಎಂಬ ಹೆಸರಿನಲ್ಲಿ ಸಮೀಹ ಸಲ್ಮಿ ಎಂಬ ಹೆಸರಿನ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಪ್ರಸಾರ ಮಾಡಿದ ಕುರಿತು ಐಪಿಸಿ ಕಲಂ 505(ಸಿ)(1)ರಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಾಹೀರಾತು
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಪ್ರಸಾರ ಮಾಡಬಾರದಾಗಿ ಕೋರಲಾಗಿದೆ. ಇಂಥ ಸಂದೇಶಗಳನ್ನು ಕಳುಹಿಸಿದಲ್ಲಿ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ನಿಮ್ಮ ಮೊಬೈಲ್ ಗೆ ಪ್ರಚೋದನಕಾರಿ ಸಂದೇಶ ಬಂದಲ್ಲಿ ಅದರ ಸ್ಕ್ರೀನ್ಶಾಟ್ ತೆಗೆದು 9480800941 ಅಥವಾ 9480805300ಗೆ ಫಾರ್ವರ್ಡ್ ಮಾಡಲು ಪೊಲೀಸರು ವಿನಂತಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಭೂಷಣ್ ಜಿ. ಬೊರಸೆ ಕಲ್ಲಡ್ಕದಲ್ಲಿ ನಡೆದ ಶಾಂತಿಸಭೆಯಲ್ಲಿ ಹೇಳಿಕೆ ನೀಡಿ, ಪ್ರಚೋದನಕಾರಿ ಸಂದೇಶ ಹರಡುವುದೂ ಅಪರಾಧ, ಅದರ ವಿರುದ್ಧ ದೂರು ನೀಡಿ ಎಂದಿದ್ದರು. ಅದರ ಪಶ್ಚಾತ್ ಪರಿಣಾಮವಾಗಿ ಎರಡು ಪ್ರಕರಣಗಳು ಬಂಟ್ವಾಳ ನಗರ ಠಾಣೆಯಲ್ಲಿ ಮಂಗಳವಾರ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪ್ರಚೋದನಕಾರಿ ಸಂದೇಶ: ಎರಡು ಪ್ರಕರಣ ದಾಖಲು"
Be the first to comment on "ಪ್ರಚೋದನಕಾರಿ ಸಂದೇಶ: ಎರಡು ಪ್ರಕರಣ ದಾಖಲು"