ಬಂಟ್ವಾಳ

ಸಚಿವರಿಂದ ಪೋಲಿಸರಿಗೆ ನೈತಿಕ ಸ್ಥೈರ್ಯ -ಅಬ್ಬಾಸ್ ಅಲಿ

ಬಂಟ್ವಾಳ ಕ್ಷೇತ್ರದ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಅವರಿಂದ ಪೊಲೀಸರಿಗೆ ನೈತಿಕ ಸ್ಥೈರ್ಯ ಒದಗಿಸುವ ಕೆಲಸವಾಗುತ್ತಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ ಹೇಳಿದ್ದಾರೆ.
ಮೂರು ದಶಕಗಳಿಂದ ಅತ್ಯಂತ ಪ್ರಾಮಾಣಿಕ, ಭ್ರಷ್ಟಾಚಾರರಹಿತ ಕಳಂಕರಹಿತವಾಗಿ ಜನರಿಗೆ ಸ್ಪಂದಿಸುತ್ತಿದ್ದು ಕ್ಷೇತ್ರದ ಮತದಾರರು ಅವರ ಮೇಲೆ ವಿಶ್ವಾಸವಿಟ್ಟು  ಆರು ಬಾರಿ ವಿಧಾನಸಭೆಗೆ ಕಳಿಸಿದ್ದಾರೆ. ಜನರ ಈ ವಿಶ್ವಾಸಕ್ಕೆ ಅವರು ಎಂದೂ ಚ್ಯುತಿ ತರದೆ , ಅಭಿವೃದ್ಧಿ ಕೆಲಸಗಳು ಮತ್ತು ಸರ್ವಧರ್ಮಿಯರನ್ನು ಸಮಾನವಾಗಿ ಕಾಣುತ್ತಾ ಜನರ ಪ್ರೀತಿ ಗಳಿಸಿದ್ದಾರೆ. ಕೋಮು ಗಲಭೆ ಸೃಷ್ಟಿಸಿ ಅಭಿವೃದ್ಧಿ ಕೆಲಸಗಳನ್ನು ಮರೆಮಾಚಲು ಸಾಧ್ಯವಿಲ್ಲ. ಯಾವುದೇ ಪ್ರತಿಭಟನೆಗಳಿಂದ, ಹೇಳಿಕೆಗಳಿಂದ ಅವರ ಸಾಧನೆಗೆ ಧಕ್ಕೆಯಾಗುವುದಿಲ್ಲ. ಕೋಮು ಗಲಬೆ ಸಂದರ್ಭದಲ್ಲಿ ಅಮಾಯಕರನ್ನು ಬಂಧಿಸಬೇಡಿ ಸರ್ವರನ್ನು ಸಮಾನವಾಗಿ ಕಾಣುವ ಮುಖಾಂತರ ಸೌಹಾರ್ದತೆಯನ್ನು ಕಾಪಾಡಿ, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಕೆಲಸ ನಿರ್ವಹಿಸಿ ಎಂದು ಪೋಲೀಸ್ ವರಿಷ್ಠಾಕಾಧಿರಿಗೆ ನಿರ್ದೇಶನ ಮಾಡುವ ಮೂಲಕ ಪೋಲೀಸರಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ಮೂಲ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದರಿಂದ ಯಾವ ಪ್ರಯೋಜನವಿಲ್ಲ. ಕ್ಷೇತ್ರದ ನಾಗರಿಕರಿಗೆ ಯಾವುದು ಸರಿ ಯಾವುದು ತಪ್ಪು ಎಂದು ಚಿಂತಿಸುವ ಸಾಮರ್ಥ್ಯವಿದೆ . ಸಮಸ್ತ ಕಾಂಗ್ರೆಸ್‌ನ ಕಾರ್ಯಕರ್ತರು ಅಭಿವೃದ್ಧಿ ಕೆಲಸ ಮತ್ತು ಸೌಹಾರ್ದತೆ ಶಾಂತಿ ಪರ ಇದ್ದು ಸಚಿವರ ಜನಪರ ಕೆಲಸಗಳಿಗೆ ಯಾವತ್ತೂ ಬೆಂಬಲಿಸುತ್ತದೆ ಎಂದು ಅಬ್ಬಾಸ್ ಆಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.