ಬಂಟ್ವಾಳ

ಪರಿಸ್ಥಿತಿ ಶಾಂತ, ಆರೋಪಿಗಳ ಬಂಧನ ಶೀಘ್ರ – ಎಡಿಜಿಪಿ ಅಲೋಕ್ ಮೋಹನ್

ಬಂಟ್ವಾಳನ್ಯೂಸ್ ವರದಿ

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ಪೊಲೀಸ್ ಸರ್ಪಗಾವಲು ಗುರುವಾರವೂ ಮುಂದುವರಿಯಿತು. ಬುಧವಾರ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜನರಲ್ಲಿ ಮೂಡಿದ್ದ ಆತಂಕ ಮರೆಯಾಗಲಿಲ್ಲ. ತಾಲೂಕು ಕೇಂದ್ರ ಬಿ.ಸಿ.ರೋಡ್ ಬಂಟ್ವಾಳದಲ್ಲಿ ಎಂದಿನ ಜನಸಂದಣಿ ಕಂಡುಬರಲಿಲ್ಲ.

ಗುರುವಾರ ಮಧ್ಯಾಹ್ನ ಬಳಿಕ ಆಗಮಿಸಿದ ಎಡಿಜಿಪಿ ಅಲೋಕ್ ಮೋಹನ್ ಅವರು, ಕಲ್ಲಡ್ಕ, ಮೇಲ್ಕಾರ್, ಟೋಲ್ ಬೂತ್ ಮತ್ತು ತುಂಬೆ ಕಡೆಗಳಿಗೆ ತೆರಳಿ, ಬೆಂಜನಪದವು ಸಮೀಪ ತೆರಳಿ ಬಿ.ಸಿ.ರೋಡ್ ನಲ್ಲಿರುವ ಬಂಟ್ವಾಳ ನಗರ ಠಾಣೆಗೆ ಬಂದರು. ಎಸ್ಪಿ ಅಣ್ಣಾಮಲೈ, ಭೂಷಣ್ ಜಿ. ಬೊರಸೆ ಅವರಿಗೆ ಸಾಥ್ ನೀಡಿದರು. ಅದಾದ ಬಳಿಕ ಮತ್ತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಎಡಿಜಿಪಿ, ಇಡೀ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ನೂತನ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಸಹಿತ ಉನ್ನತ ಅಧಿಕಾರಿಗಳು ಜತೆಗಿದ್ದರು.
ಆರೋಪಿಗಳ ಬಂಧನ ಶೀಘ್ರ:
ತಾಲೂಕಿನಲ್ಲಿ ಶಾಂತಿಯುತ ಪರಿಸ್ಥಿತಿಯಿದ್ದೂ ಯಾವುದೇ ತೊಂದರೆಯಿಲ್ಲ.  ಬೆಂಜನಪದವು ಕೊಲೆ ಪ್ರಕರಣ ತನಿಖೆ ಪ್ರಗತಿಯಲ್ಲಿದ್ದು ಆರೋಪಿಗಳ ಶೀಘ್ರ ಬಂಧನವಾಗಲಿದೆ ಎಂದು ಎಡಿಜಿಪಿ ಅಲೋಕ್ ಮೋಹನ್ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.
ನಿಷೇಧಾಜ್ಷೆ ಸಂದರ್ಭ ಪ್ರತಿಭಟನೆಗೆ ಅವಕಾಶ ಇಲ್ಲ
ಜಿಲ್ಲೆಯಲ್ಲಿ ಜೂ.27ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ. ನಿಷೇಧಾಜ್ಞೆ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ, ಇನ್ನೂ ಪ್ರತಿಭಟನೆಗೆ ಎಲ್ಲಿ ಅವಕಾಶ ಎಂದು ಎಡಿಜಿಪಿ ಅಲೋಕ್ ಮೋಹನ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಡೀಯೋ ವರದಿಗೆ ಕ್ಲಿಕ್ ಮಾಡಿ:

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ