ಕಲ್ಲಡ್ಕ ಶ್ರೀರಾಮ ಹೈಸ್ಕೂಲಿನಲ್ಲಿ ಯೋಗ ದಿನಾಚರಣೆ

ಯೋಗ ದಿನನಿತ್ಯ ಜೀವನದ ಒಂದು ಭಾಗವಾಗಲಿ ಎಂದು ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕ ಶಿವಶಂಕರ್ ಹೇಳಿದರು.
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು.


ಮನುಷ್ಯನಲ್ಲಿ ಆರೋಗ್ಯವಂತ ಶರೀರ, ಕಂಪನರಹಿತ ಉಸಿರು, ವರ್ತಮಾನದಲ್ಲಿರುವಂತ ಮನಸ್ಸು, ಒಳ್ಳೆಯದನ್ನು ಸಂಗ್ರಹಿಸುವಂತ ಬುದ್ಧಿ, ಸಂತೋಷದ ನೆನಪುಗಳು ಮತ್ತು ಎಲ್ಲವನ್ನು ಒಳಗೊಂಡ ಅಹಂಕಾರ, ಇರಬೇಕು. ಯೋಗ ಮಾಡುವುದರಿಂದ ದೇಹದ ಸೂಕ್ಷ್ಮ ಗ್ರಂಥಿಗಳ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಉತ್ಸಾಹ, ಸೃಜನಶೀಲತೆ, ಉದಾರತೆ ಮೈಗೂಡುವಂತೆ ಮಾಡುತ್ತದೆ. ಹೂವಿನ ಮೊಗ್ಗು ಅರಳಲು ಸೂರ್‍ಯನ ಬೆಳಕು ಬೇಕು, ಹಾಗೆ ಮನುಷ್ಯನ ಮನಸ್ಸು ಅರಳಬೇಕಾದರೆ ಯೋಗ ಬೇಕು. ಆದ್ದರಿಂದ ಯೋಗ ದಿನ ನಿತ್ಯ ಜೀವನದ ಒಂದು ಭಾಗವಾಗಿರಬೇಕು ಎಂದು ಅವರು ಹೇಳಿದರು.
ಆಧುನಿಕ ಯುಗದಲ್ಲಿ ಮನುಷ್ಯ ಒತ್ತಡಗಳ ಸುಳಿಯಲ್ಲಿ ಸಿಲುಕಿದ್ದಾನೆ. ಇಂತಹ ಒತ್ತಡವನ್ನು ಯೋಗ ನಿವಾರಿಸುತ್ತದೆ. ಧನಾತ್ಮಕ ಮತ್ತು ಋಣಾತ್ಮಕ ಚಿಂತನೆಗಳು ಮನುಷ್ಯನ ಚಿತ್ತದಲ್ಲಿ ಸಾಮಾನ್ಯವಾಗಿ ಇರುತ್ತದೆ.  ಮನುಷ್ಯನ ಋಣಾತ್ಮಕ ಭಾವನೆಗಳನ್ನು ದೂರಗೊಳಿಸಿ ಧನಾತ್ಮಕ ಚಿಂತನಗಳನ್ನು ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ. ಎಂದು ಯೋಗದ ಮಹತ್ವವನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ತಿಳಿಸಿದರು.
ಕಾರ್ಯಕ್ರಮದಲ್ಲಿ ಆರ್ಟ್ಸ್ ಆಫ್ ಲಿವಿಂಗ್‌ನ ಶಿಕ್ಷಕರಾದ ಸಿ.ರಂಜನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್, ಶಾಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾರೀರಿಕ ಶಿಕ್ಷಕರಾದ ರಾಧಾಕೃಷ್ಣ ಅಡ್ಯಂತಾಯ ಉಪಸ್ಥಿತಿಯಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಾದ ಯತಿಕಾ ಸ್ವಾಗತಿಸಿದರು. ಶಮಿತ ವಂದಿಸಿದರು. ಶಾರೀರಿಕ ಶಿಕ್ಷಕರಾದ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮ ಹೈಸ್ಕೂಲಿನಲ್ಲಿ ಯೋಗ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*