ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಹೈಸ್ಕೂಲಿನಲ್ಲಿ ಯೋಗ ದಿನಾಚರಣೆ

ಯೋಗ ದಿನನಿತ್ಯ ಜೀವನದ ಒಂದು ಭಾಗವಾಗಲಿ ಎಂದು ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕ ಶಿವಶಂಕರ್ ಹೇಳಿದರು.
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು.


ಮನುಷ್ಯನಲ್ಲಿ ಆರೋಗ್ಯವಂತ ಶರೀರ, ಕಂಪನರಹಿತ ಉಸಿರು, ವರ್ತಮಾನದಲ್ಲಿರುವಂತ ಮನಸ್ಸು, ಒಳ್ಳೆಯದನ್ನು ಸಂಗ್ರಹಿಸುವಂತ ಬುದ್ಧಿ, ಸಂತೋಷದ ನೆನಪುಗಳು ಮತ್ತು ಎಲ್ಲವನ್ನು ಒಳಗೊಂಡ ಅಹಂಕಾರ, ಇರಬೇಕು. ಯೋಗ ಮಾಡುವುದರಿಂದ ದೇಹದ ಸೂಕ್ಷ್ಮ ಗ್ರಂಥಿಗಳ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಉತ್ಸಾಹ, ಸೃಜನಶೀಲತೆ, ಉದಾರತೆ ಮೈಗೂಡುವಂತೆ ಮಾಡುತ್ತದೆ. ಹೂವಿನ ಮೊಗ್ಗು ಅರಳಲು ಸೂರ್‍ಯನ ಬೆಳಕು ಬೇಕು, ಹಾಗೆ ಮನುಷ್ಯನ ಮನಸ್ಸು ಅರಳಬೇಕಾದರೆ ಯೋಗ ಬೇಕು. ಆದ್ದರಿಂದ ಯೋಗ ದಿನ ನಿತ್ಯ ಜೀವನದ ಒಂದು ಭಾಗವಾಗಿರಬೇಕು ಎಂದು ಅವರು ಹೇಳಿದರು.
ಆಧುನಿಕ ಯುಗದಲ್ಲಿ ಮನುಷ್ಯ ಒತ್ತಡಗಳ ಸುಳಿಯಲ್ಲಿ ಸಿಲುಕಿದ್ದಾನೆ. ಇಂತಹ ಒತ್ತಡವನ್ನು ಯೋಗ ನಿವಾರಿಸುತ್ತದೆ. ಧನಾತ್ಮಕ ಮತ್ತು ಋಣಾತ್ಮಕ ಚಿಂತನೆಗಳು ಮನುಷ್ಯನ ಚಿತ್ತದಲ್ಲಿ ಸಾಮಾನ್ಯವಾಗಿ ಇರುತ್ತದೆ.  ಮನುಷ್ಯನ ಋಣಾತ್ಮಕ ಭಾವನೆಗಳನ್ನು ದೂರಗೊಳಿಸಿ ಧನಾತ್ಮಕ ಚಿಂತನಗಳನ್ನು ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ. ಎಂದು ಯೋಗದ ಮಹತ್ವವನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ತಿಳಿಸಿದರು.
ಕಾರ್ಯಕ್ರಮದಲ್ಲಿ ಆರ್ಟ್ಸ್ ಆಫ್ ಲಿವಿಂಗ್‌ನ ಶಿಕ್ಷಕರಾದ ಸಿ.ರಂಜನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್, ಶಾಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾರೀರಿಕ ಶಿಕ್ಷಕರಾದ ರಾಧಾಕೃಷ್ಣ ಅಡ್ಯಂತಾಯ ಉಪಸ್ಥಿತಿಯಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಾದ ಯತಿಕಾ ಸ್ವಾಗತಿಸಿದರು. ಶಮಿತ ವಂದಿಸಿದರು. ಶಾರೀರಿಕ ಶಿಕ್ಷಕರಾದ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago