ಕೇಂದ್ರವೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದ ಕೃಷಿ ಸಾಲವನ್ನು ಮನ್ನಾ ಮಾಡಿ ರೈತರಿಗೆ ನೆರವಾಗುವಲ್ಲಿ ರಾಜ್ಯದಲ್ಲಿನ ಕೇಂದ್ರದ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರು ಶ್ರಮಿಸಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.
ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಮತ್ತು ಬರಗಾಲದಿಂದ ರಾಜ್ಯದಲ್ಲಿನ ರೈತರು ತತ್ತರಿಸುತ್ತಿದ್ದು ಸಹಕಾರಿ ಸಂಸ್ಥೆಗಳಿಂದ ಪಡೆದ ಬೆಳೆ ಸಾಲವನ್ನು ಮರು ಪಾವತಿಸಲಾಗದೆ ಕಂಗಾಲಾಗಿರುವ ಪರಿಸ್ಥಿತಿಯನ್ನು ಮನಗಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಜೂನ್ 20ರವರೆಗೆ ಕೃಷಿ ಅಲ್ಪಾವಧಿ ಸಾಲವನ್ನು ಪಡೆದಿರುವ ರೈತರ ಅಲ್ಪಾವಧಿ ಕೃಷಿ ಮತ್ತು ಬೆಳೆ ಸಾಲದಲ್ಲಿ 50 ಸಾವಿರ ರೂ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ಇದು ರೈತರ ಪಾಲಿಗೆ ವರದಾನವಾಗಿದ್ದು ಈ ಕುರಿತು ಮುಖ್ಯಮಂತ್ರಿಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)