ಕಲ್ಲಡ್ಕ ಮತ್ತು ಬೆಂಜನಪದವಿನಲ್ಲಿ ನಡೆದ ಅಹಿತಕರ ಘಟನೆ ಬಳಿಕ ಬಂಟ್ವಾಳ ತಾಲೂಕಿನಲ್ಲಿ ಬಂದೋಬಸ್ತ್ ಬಿಗುಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ ಬಂಟ್ವಾಳಕ್ಕೆ ಬಂದಿದೆ. ಶುಕ್ರವಾರ ಎಡಿಜಿಪಿ ಅಲೋಕ್ ಮೋಹನ್ ಬಂಟ್ವಾಳ ನಗರ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಐಜಿ ಹರಿಶೇಖರನ್, ಎಸ್ಪಿಗಳಾದ ಭೂಷಣ್ ಜಿ. ಬೊರಸೆ, ಸುಧೀರ್ ರೆಡ್ಡಿ, ಎಡಿಶನಲ್ ಎಸ್ಪಿ ವಿಷ್ಣುವರ್ಧನ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಜತೆಗಿದ್ದು ಪರಿಸ್ಥಿತಿ ಅವಲೋಕನ ನಡೆಸಿದರು.
ಜಾಹೀರಾತು
ವಾಟ್ಸಾಪ್, ಫೇಸ್ ಬುಕ್ ನಂಥ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಿಸುವುದು ನಿಂತಿಲ್ಲ. ಆರೋಪ, ಪ್ರತ್ಯಾರೋಪಗಳು, ಪ್ರಚೋದನಕಾರಿ ಸಂದೇಶಗಳನ್ನು ಹರಡಿಸುವುದರ ವಿರುದ್ಧ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಸುಳಿವು ಕೊಟ್ಟವರ ಹೆಸರನ್ನು ಗುಪ್ತವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಬಿ.ಸಿ.ರೋಡ್ ಸಹಿತ ಪ್ರಮುಖ ಸೂಕ್ಷ್ಮ ಪ್ರದೇಶಗಳಾದ ಕಲ್ಲಡ್ಕ, ಮೇಲ್ಕಾರ್, ಫರಂಗಿಪೇಟೆ ಗಳಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ ಸಂಚಾರ ನಡೆಸಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳಕ್ಕೆ ಬಂದಿಳಿದ ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ"
Be the first to comment on "ಬಂಟ್ವಾಳಕ್ಕೆ ಬಂದಿಳಿದ ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ"