ಬಂಟ್ವಾಳ

ಬಂಟ್ವಾಳಕ್ಕೆ ಬಂದಿಳಿದ ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ

ಕಲ್ಲಡ್ಕ ಮತ್ತು ಬೆಂಜನಪದವಿನಲ್ಲಿ ನಡೆದ ಅಹಿತಕರ ಘಟನೆ ಬಳಿಕ ಬಂಟ್ವಾಳ ತಾಲೂಕಿನಲ್ಲಿ ಬಂದೋಬಸ್ತ್ ಬಿಗುಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ ಬಂಟ್ವಾಳಕ್ಕೆ ಬಂದಿದೆ. ಶುಕ್ರವಾರ ಎಡಿಜಿಪಿ ಅಲೋಕ್ ಮೋಹನ್ ಬಂಟ್ವಾಳ ನಗರ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಐಜಿ ಹರಿಶೇಖರನ್, ಎಸ್ಪಿಗಳಾದ ಭೂಷಣ್ ಜಿ. ಬೊರಸೆ, ಸುಧೀರ್ ರೆಡ್ಡಿ, ಎಡಿಶನಲ್ ಎಸ್ಪಿ ವಿಷ್ಣುವರ್ಧನ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಜತೆಗಿದ್ದು ಪರಿಸ್ಥಿತಿ ಅವಲೋಕನ ನಡೆಸಿದರು.

ಜಾಹೀರಾತು

ವಾಟ್ಸಾಪ್, ಫೇಸ್ ಬುಕ್ ನಂಥ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಿಸುವುದು ನಿಂತಿಲ್ಲ. ಆರೋಪ, ಪ್ರತ್ಯಾರೋಪಗಳು, ಪ್ರಚೋದನಕಾರಿ ಸಂದೇಶಗಳನ್ನು ಹರಡಿಸುವುದರ ವಿರುದ್ಧ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಸುಳಿವು ಕೊಟ್ಟವರ ಹೆಸರನ್ನು ಗುಪ್ತವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

ಬಿ.ಸಿ.ರೋಡ್ ಸಹಿತ ಪ್ರಮುಖ ಸೂಕ್ಷ್ಮ ಪ್ರದೇಶಗಳಾದ ಕಲ್ಲಡ್ಕ, ಮೇಲ್ಕಾರ್, ಫರಂಗಿಪೇಟೆ ಗಳಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕ್ಷಿಪ್ರ ಕಾರ್ಯಪಡೆ ಸಂಚಾರ ನಡೆಸಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ