ಬಂಟ್ವಾಳ

ಕೊಲೆ ಪ್ರಕರಣ ಆರೋಪಿಗಳ ಬಂಧನ

ಜೂನ್ 21ರಂದು ಬೆಳಗ್ಗೆ ಬೆಂಜನಪದವು ಸಮೀಪ ಎಸ್.ಡಿ.ಪಿ.ಐ. ನಾಯಕ ಅಶ್ರಫ್ (35) ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ಮಂಗಳೂರಿನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಐಜಿಪಿ ಹರಿಶೇಖರನ್ ಮಾಧ್ಯಮಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.  ಪವನ್ ಕುಮಾರ್ ಅಲಿಯಾಸ್ ಪುಂಡ (24), ಸಂತೋಷ್ ಅಲಿಯಾಸ್ ಸಂತು (23), ಶಿವಪ್ರಸಾದ್ ಅಲಿಯಾಸ್ ಶಿವು (24), ರಂಜಿತ್ (28) ಮತ್ತು ಅಭಿನ್ ರೈ ಅಲಿಯಾಸ್ ಅಭಿ (23) ಎಂಬವರು ಆರೋಪಿಗಳಾಗಿದ್ದು, ಅವರನ್ನು ದಸ್ತಗಿರಿ ಮಾಡಲಾಯಿತು. ಭರತ್ ಕುಮ್ಡೆಲು ಮತ್ತು ದಿವ್ಯರಾಜ ಶೆಟ್ಟಿ ಮಾರ್ಗದರ್ಶನದಲ್ಲಿ ಕೃತ್ಯ ಎಸಗಿದ್ದಾರೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ದೊರಕಲಿದೆ ಎಂದು ಐಜಿಪಿ ಹರಿಶೇಖರನ್ ಸುದ್ದಿಗಾರರಿಗೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ