ಡ್ರಗ್ಸ್ ಜಾಲ ಕುರಿತು ನಿಗಾ ವಹಿಸಿ : ಮಾಣಿಲ ಶ್ರೀಗಳು

ಶಾಲೆ ಕಾಲೇಜುಗಳ ಕ್ಯಾಂಪಸ್‌ನಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿ ಹರಡುತ್ತಿದ್ದು ಪೋಷಕರು ಮಕ್ಕಳ ಬಗ್ಗೆ ನಿಗಾ ವಹಿಸಬೇಕು ಎಂದು ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಜಾಹೀರಾತು

ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ  ನಡೆಯುತ್ತಿರುವ ೪೮ ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಅಂಗವಾಗಿ ಭಾನುವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ದೇವಸ್ಥಾನ, ಮಠ ಮಂದಿರಗಳು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಗಳೊಮದಿಗೆ ಸಮಾಜಮುಖಿ ಕಾರ್ಯಗಳನ್ನು ನಡೆಸಬೇಕು

ಎಂದ ಶ್ರೀಗಳು ವಲರಮಹಾಲಕ್ಷ್ಮೀ ಪೂಜೆ ಕೇವಲ 48 ದಿನ ಮಾತ್ರ ಆಚರಿಸುವ ಪೂಜೆಯಲ್ಲ, ಅದು ಜೀವನಪೂರ್ತಿ ಅನುಷ್ಠಾನ ಮಾಡಬಹುದಾದ ವೃತಾಚರಣೆಯಾಗಿದೆ ಎಂದರು.

ಶಾಸಕಿ ಶಕುಂತಳ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಪಾಶ್ಚ್ಯಾತ್ಯರು ಕೂಡ ಅನುಕರಿಸುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ನಾವೇ ಮರೆಯುವುದು ಸರಿಯಲ್ಲ ಎಂದರು. ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ  ಮಾಣಿಲ ಶ್ರೀ ಮಹಾಲಕ್ಷ್ಮೀ ಸೇವಾ ಸಮಿತಿಯನ್ನು ಈ  ಸಂದರ್ಭ ಅಧಿಕೃತವಾಗಿ ಘೋಷಿಸಲಾಯಿತು. ಸಮಿತಿಯ ಉಪಾಧ್ಯಕ್ಷರಾದ ಪ್ರಭಾಕರ ಪ್ರಭು, ಕೃಷ್ಣ ಶ್ಯಾಮ್, ಪುರುಷೋತ್ತಮ ಸಾಲ್ಯಾನ್ ಶಂಭೂರು, ರಾಜ್‌ಕುಮಾರ್, ಕಾರ್ಯದರ್ಶಿ ಕೇಶವ ಅಂತರ ಸಂಘಟನಾ ಕಾರ್ಯದರ್ಶಿ ಸಂದೀಪ್ ಸಾಲ್ಯಾನ್, ಕೋಶಾಧಿಕಾರಿ ದಾಮೋದರ ಮಾಸ್ತರ್, ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿಯ ಅಧ್ಯಕ್ಷೆ ವನಿತಾ ವಿ ಶೆಟ್ಟಿ, ರಾಜೇಶ್ ಬಾಳೆಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಟ್ರಸ್ಟಿಗಳಾದ ಜಯರಾಜ್ ಪ್ರಕಾಶ್, ಚಂದ್ರಶೇಖರ್ ತೇಜ,  ಹಾಜರಿದ್ದರು. ದಾಮೋದರ ಬಿ.ಎಂ.ಸ್ವಾಗತಿಸಿ, ಉಮೇಶ್ ಪಿ.ಕೆ. ನೂತನ ಸಮಿತಿಯ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು, ಸಮಿತಿಯ ಅಧ್ಯಕ್ಷ ಮಚ್ಚೇಂದ್ರ ಸಾಲ್ಯಾನ್  ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಕ್ಷೇತ್ರದಲ್ಲಿ  ಶ್ರೀ ಲಕ್ಷ್ಮೀ ಪೂಜೆ, ಶ್ರೀನಾಗಾದೇವರ ಪೂಜೆ, ಗೋಮಾತಾ ಪೂಜೆ, ಬಾಲಭೋಜನ, ಕನಕಧಾರಾ ಯಾಗ, ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ, ವಿಷ್ಣುಸಹಸ್ರನಾಮ ಪಠಣ, ಶ್ರೀ ದುರ್ಗಾ ಪೂಜೆ, ಆಶ್ಲೇಷಾ ಬಲಿ, ಮಹಾಪೂಜೆ, ವಾಯನದಾನ, ಅನ್ನಪ್ರಸಾದ ಸೇವೆ ನಡೆಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡ್ರಗ್ಸ್ ಜಾಲ ಕುರಿತು ನಿಗಾ ವಹಿಸಿ : ಮಾಣಿಲ ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*