ಕಲ್ಲಡ್ಕ

ಮೃತ್ಯುಸ್ವರೂಪಿಯಾದ ಟ್ಯಾಂಕರ್: ಓರ್ವ ಸಾವು

 

 ಕಾರೊಂದಕ್ಕೆ ತೈಲ ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬಂಟ್ವಾಳ ಕೆಳಗಿನಪೇಟೆ ನಿವಾಸಿ ಮೂಸಬ್ಬ (85) ಸಾವನ್ನಪ್ಪಿದ್ದಾರೆ.

ಮಾಣಿ ಸಮೀಪ ಬುಡೋಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಘಟನೆ ನಡೆದಿದ್ದು, ಮೂಸಬ್ಬರ ಮಗ ಮುಹಮ್ಮದ್(46), ಸೊಸೆ ತಾಹಿರ(39) ಮೊಮ್ಮಕ್ಕಳಾದ ಮುಹಮ್ಮದ್ ಇರ್ಫಾನ್(20) ಫಾತಿಮಾ ತಸ್ಲೀಮ(17), ಮುಹಮ್ಮದ್ ಇಸ್ಫಾಕ್(13) ಗಾಯಗೊಂಡಿದ್ದು ತುಂಬೆ ಮತ್ತು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು

ಬಂಟ್ವಾಳದ ಮೂಸಬ್ಬ ಅವರು, ಇವರು ವ್ಯಾಪಾರದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಸಕಲೇಶಪುರದಲ್ಲಿ ನೆಲೆಸಿದ್ದಾರೆ. ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ ಶಾಂತಿಅಂಗಡಿಯ ತಾಹಿರಾ ಅವರ ಮನೆಗೆ ಬರುತ್ತಿದ್ದ ಸಂದರ್ಭ, ಮಾಣಿ ಸಮೀಪದ ಬುಡೋಳಿಯಲ್ಲಿ ತೈಲ ಸಾಗಟದ ಟ್ಯಾಂಕರ್ ಢಿಕ್ಕಿ ಹೊಡೆಯಿತು.

ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಎಲ್ಲರನ್ನೂ ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇವರಲ್ಲಿ ಮಹಮ್ಮದ್ ಇರ್ಫಾನ್ ಮತ್ತು ಮೂಸಬ್ಬ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೂಸಬ್ಬ ಮೃತಪಟ್ಟರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ