ಸಾಮರಸ್ಯದ ಬಾಳ್ವೆಗೆ ಒಂದು ಹೆಜ್ಜೆ ಮುಂದಿಡೋಣ

ಮೇ 27ರಿಂದ ಜೂನ್ 2, ಜೂನ್ 3ರಿಂದ ಜೂನ್ 9, ಜೂನ್ 10ರಿಂದ ಜೂನ್ 16, ಜೂನ್ 17ರಿಂದ ಜೂನ್ 23, ಜೂನ್ 23ರಿಂದ ಜೂನ್ 29. ಇದು ಬಂಟ್ವಾಳ ತಾಲೂಕಿನಾದ್ಯಂತ ಕಳೆದೊಂದು ತಿಂಗಳು ಸೆ.144ರನ್ವಯ ನಿಷೇಧಾಜ್ಞೆ ವಿಸ್ತರಿಸಿಕೊಂಡ ಪರಿ.

ಜಾಹೀರಾತು

ಈ ಮಧ್ಯೆ ಹಲ್ಲೆ, ಕಲ್ಲೆಸೆತ, ಕೊಲೆ, ದೂರು, ಆರೋಪ, ಪ್ರತ್ಯಾರೋಪ, ದ್ವೇಷ, ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅಪನಂಬಿಕೆ ಸೃಷ್ಟಿಸುವ ಬೇನಾಮಿ ವಿಚಾರಗಳು ಕಂಡುಬಂದವು. ಒಟ್ಟಾಗಿರಿ, ಸಾಮರಸ್ಯ ಕಾಪಾಡಿ ಎಂಬವರು ಅಪ್ರಸ್ತುತ ಎಂಬಂತಾಯಿತು. ಪರಿಣಾಮ ಗೊತ್ತೇ ಇದೆ. ಒಂದು ತಿಂಗಳಿಂದ ಇಡೀ ಬಂಟ್ವಾಳ ತಾಲೂಕಿನ ವಾಣಿಜ್ಯ ವ್ಯವಹಾರ ಕುಂದಿದೆ. ಜನಸಾಮಾನ್ಯರು ನೋವು ಅನುಭವಿಸುತ್ತಿದ್ದಾರೆ. ಸಂತೋಷ ಅನುಭವಿಸುವವರು ಗಲಭೆ ಸೃಷ್ಟಿಕರ್ತರು ಮತ್ತು ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡುವವರಷ್ಟೇ ಎಂಬುದು ಜನರಿಗೂ ನಿಧಾನವಾಗಿ ಅರ್ಥವಾಗತೊಡಗಿದೆ. ನಿಷೇಧಾಜ್ಞೆಯ ಬಂಧವನ್ನು ಬಿಡಿಸಬೇಕಾದರೆ ಪರಸ್ಪರ ನಂಬಿಕೆ, ವಿಶ್ವಾಸ ಅಗತ್ಯವಿದೆ. ಎಲ್ಲರೂ ಅದಕ್ಕೆ ಸಿದ್ಧರಾದರೆ, ಬೆರಳೆಣಿಕೆಯಷ್ಟಿರುವ ಮಂದಿಯೂ ಪರಿವರ್ತನೆ ಹೊಂದಬಹುದು.

ರಸ್ತೆ ಸರಿ ಇಲ್ಲದಿದ್ದರೆ, ಕುಡಿಯುವ ನೀರಿಗೆ ತೊಂದರೆ ಆದರೆ, ಯಾರಿಗಾದರೂ ರಕ್ತ ಬೇಕಾದರೆ, ಯಾರಾದರೂ ಸಮಸ್ಯೆಯಿಂದ ಬಳಲುತ್ತಿದ್ದರೆ ನಮ್ಮ ಸಂದೇಶ ಹರಡಲಿ, ಅವರ ಕಷ್ಟಗಳಿಗೆ ಸ್ಪಂದಿಸುವ ಬೆಳಕಾಗೋಣ, ಪ್ರಚೋದನಕಾರಿ ಸಂದೇಶಗಳ ರವಾನೆಗಳಿಗಿಂತ ಅದು ಒಳ್ಳೆಯದಲ್ವೇ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಮರಸ್ಯದ ಬಾಳ್ವೆಗೆ ಒಂದು ಹೆಜ್ಜೆ ಮುಂದಿಡೋಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*