ಬಂಟ್ವಾಳ

ನಿಷೇಧಾಜ್ಞೆ ವಿಸ್ತರಣೆ: ಬಿಗಿಯಾದ ಪೊಲೀಸ್ ಸರ್ಪಗಾವಲು

ಬಂಟ್ವಾಳ ತಾಲೂಕಿನವರಿಗೆ ನಿಷೇಧಾಜ್ಞೆ ಎಂಬುದು ಮಾಮೂಲು ಸಂಗತಿ ಎಂಬಂತಾಗಿದೆ. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ.

ಈ ವ್ಯಾಪ್ತಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಚೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.      ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.   ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೀಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರೊಂದಿಗೆ ತಾಲೂಕಿನಲ್ಲಿ ಪೊಲೀಸ್ ವ್ಯವಸ್ಥೆಯನ್ನೂ ಮತ್ತಷ್ಟು ಬಿಗುಗೊಳಿಸಲಾಗಿದೆ. ಎಲ್ಲೆಡೆ ಪೊಲೀಸ್ ವಾಹನಗಳದ್ದೇ ದೃಶ್ಯ ಕಂಡುಬರುತ್ತಿದೆ. ಶಾಂತಿ, ಸುವ್ಯವಸ್ಥೆ ನೆಲೆಸುವವರೆಗೆ ನಿಷೇಧಾಜ್ಞ ಅನಿವಾರ್ಯ ಎಂಬ ನಂಬಿಕೆ ಆಡಳಿತದ್ದು.
ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.