ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ಚಂದ್ರಪ್ರಕಾಶ್ ಶೆಟ್ಟಿ ದೂರು

ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರ ಹಾಗೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.

ವಾಟ್ಸಪ್‌ನಲ್ಲಿ ತನ್ನ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿ ಸುಳ್ಳುಸುದ್ದಿಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಸಾಮಾಜಿಕ ಶಾಂತಿಗೆ ಭಂಗವಾಗುವ ರೀತಿಯಲ್ಲಿ, ಕೋಮುಗಲಭೆ ಪ್ರಚೋದಿಸುವ ಸುದ್ದಿಗಳನ್ನು ರವಾನಿಸಿ ಮಾನಹಾನಿ ಮಾಡುತ್ತಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಠಾಣೆಗೆ ನೀಡಿರುವ  ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿರುವುದು ಬೇಸರ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಧಾನ ಆರೋಪಿಯ ಹುಡುಕಾಟದಲ್ಲಿದ್ದಾರೆ. ಹೀಗಿರುವಾವ ರಾಜಕೀಯ ದುರುದ್ದೇಶಕ್ಕಾಗಿ ಕೆಲ ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಕೃತ್ಯದಲ್ಲಿ ತೊಡಗಿಸಿರುವ ವ್ಯಕ್ತಿಗಳ ದೂರವಾಣಿ ಸಹಿತ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ತಕ್ಷಣ ಕ್ರಮ ಜರುಗಿಸಲು ಪೊಲೀಸರನ್ನು ಆಗ್ರಹಿಸಿರುವುದಾಗಿ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ಚಂದ್ರಪ್ರಕಾಶ್ ಶೆಟ್ಟಿ ದೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*