ಬಂಟ್ವಾಳ

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ಚಂದ್ರಪ್ರಕಾಶ್ ಶೆಟ್ಟಿ ದೂರು

ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರ ಹಾಗೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.

ವಾಟ್ಸಪ್‌ನಲ್ಲಿ ತನ್ನ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿ ಸುಳ್ಳುಸುದ್ದಿಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಸಾಮಾಜಿಕ ಶಾಂತಿಗೆ ಭಂಗವಾಗುವ ರೀತಿಯಲ್ಲಿ, ಕೋಮುಗಲಭೆ ಪ್ರಚೋದಿಸುವ ಸುದ್ದಿಗಳನ್ನು ರವಾನಿಸಿ ಮಾನಹಾನಿ ಮಾಡುತ್ತಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಠಾಣೆಗೆ ನೀಡಿರುವ  ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿರುವುದು ಬೇಸರ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಧಾನ ಆರೋಪಿಯ ಹುಡುಕಾಟದಲ್ಲಿದ್ದಾರೆ. ಹೀಗಿರುವಾವ ರಾಜಕೀಯ ದುರುದ್ದೇಶಕ್ಕಾಗಿ ಕೆಲ ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಕೃತ್ಯದಲ್ಲಿ ತೊಡಗಿಸಿರುವ ವ್ಯಕ್ತಿಗಳ ದೂರವಾಣಿ ಸಹಿತ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ತಕ್ಷಣ ಕ್ರಮ ಜರುಗಿಸಲು ಪೊಲೀಸರನ್ನು ಆಗ್ರಹಿಸಿರುವುದಾಗಿ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.