ಭಿಕ್ಷೆ ಬೇಡಿ Service ರಸ್ತೆ ರಿಪೇರಿ

ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರ ಅಭಿವೃದ್ಧಿಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಬಿ.ಸಿ.ರೋಡಿನ ಆಟೋ ಚಾಲಕರು ಮತ್ತು ಸಾರ್ವಜನಿಕರು ಭಿಕ್ಷೆ ಬೇಡುವ ಮೂಲಕ ಹಣ ಸಂಗ್ರಹಿಸಿ ಬಿ.ಸಿ.ರೋಡ್ ಸರ್ವೀಸ್ ರಸ್ತೆ ರಿಪೇರಿಯನ್ನು ಶನಿವಾರ ನಡೆಸಿದರು.

ಜಾಹೀರಾತು

ರಸ್ತೆಗೆ ಸಂಬಂಧಿಸಿದ ಇಲಾಖೆಯಾದ ಎನ್.ಎಚ್.ಎ.ಐ ವಿಳಂಬಗತಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆಗೆ ಒಳಗಾಗಿದ್ದರು. ಇದನ್ನು ಕಂಡು ಬಿ.ಸಿ.ರೋಡಿನ ಕೆಲ ಆಟೊ ರಿಕ್ಷಾ ಚಾಲಕ, ಮಾಲೀಕರು ಹಾಗೂ ಸಾರ್ವಜನಿಕರು ಶನಿವಾರ ಒಟ್ಟಾದರು. ಬೆಳಗ್ಗೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಸ್ಥರಿಂದ ಹಣ ಸಂಗ್ರಹಿಸಿದರು.

ಭಿಕ್ಷೆ ಬೇಡಿ ರಸ್ತೆ ರಿಪೇರಿ ಮಾಡಲಾಗುವುದುಎಂಬ ನಾಮಫಲಕವನ್ನು ಹಿಡಿದುಕೊಂಡ ಬ್ಯಾನರ್ ಜೊತೆ ತಿರುಗಾಟ ನಡೆಸಿ, ಬಳಿಕ ಜೆಸಿಬಿಯೊಂದನ್ನು ತಂದು, ಜಲ್ಲಿಯನ್ನು ಹಾಕಿಸಿ ರಸ್ತೆಯನ್ನು ಹದಗೊಳಿಸುವ ಕಾರ್ಯ ನಡೆಸಿದರು. ಈ ಸಂದರ್ಭ ಸರ್ವೀಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಯಿತು. ಬಿ.ಸಿ.ರೋಡ ನ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ, ಕಾರ್‍ಯದರ್ಶಿ ಚಂದ್ರಶೇಖರ್, ಟೆಂಪೋ ಚಾಲಕರ ಸಂಘದ ಅದ್ಯಕ್ಷ ಕೃಷ್ಣ ಅಲ್ಲಿಪಾದೆ, ಕಾರ್‍ಯದರ್ಶಿ ನಾರಾಯಣ, ಗೌರವಾಧ್ಯಕ್ಷ ಸದಾನಂದ  ನಾವೂರು ಮತ್ತಿತರರು  ಉಪಸ್ಥಿತರಿದ್ದರು.

ಬಿರುಮಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ರಸ್ತೆಪಕ್ಕ ಕಾಂಕ್ರೀಟ್ ಚರಂಡಿಯನ್ನು ಮಾಡಿ ಅದಕ್ಕೆ ಸ್ಲ್ಯಾಬ್ ಹಾಕುವ ಕೆಲಸವನ್ನು ಮಳೆಗಾಲ ಆರಂಭಗೊಂಡ ಬಳಿಕ ನಡೆಸಿದ್ದು ಮತ್ತಷ್ಟು ಸಮಸ್ಯೆ ಉಂಟುಮಾಡಿತ್ತು. ರಸ್ತೆಯಲ್ಲಿ ಅತಿ ದೊಡ್ಡ ಹೊಂಡಗಳು ಕಾಣಿಸತೊಡಗಿದ್ದವು. ಮಳೆ ಧಾರಾಕಾರವಾಗಿ ಸುರಿಯುತ್ತಿರುವ ಸಂದರ್ಭ ರಸ್ತೆಯಲ್ಲೆಲ್ಲ ಕೆಸರು ಮಣ್ಣು ಕಂಡುಬಂದವು. ಹಲವು ಚಿಕ್ಕಪುಟ್ಟ ಅಪಘಾತಗಳೂ ಸಂಭವಿಸಿದ್ದವು.

ವೀಡಿಯೋ ವರದಿಗೆ:

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭಿಕ್ಷೆ ಬೇಡಿ Service ರಸ್ತೆ ರಿಪೇರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*