ಮತ್ತೆ ನಿಷೇಧಾಜ್ಞೆ ವಿಸ್ತರಣೆ: ಜುಲೈ 4ರವರೆಗೆ ಸೆ.144 ಜಾರಿ

ಬರೋಬ್ಬರಿ 37 ದಿನಗಳು ಕಳೆದರೂ ನಿಷೇಧಾಜ್ಞೆಗೆ ಕಡಿವಾಣ ಬಿದ್ದಿಲ್ಲ. ಇದೀಗ ಮತ್ತೆ ಜುಲೈ 4ರ ಮಧ್ಯರಾತ್ರಿವರೆಗೆ ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ  ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೀಷ್ಠೆಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮಗಳನ್ನು ನಿಷೇಧಿಸಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮತ್ತೆ ನಿಷೇಧಾಜ್ಞೆ ವಿಸ್ತರಣೆ: ಜುಲೈ 4ರವರೆಗೆ ಸೆ.144 ಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*