ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು

ಬಿ.ಸಿ.ರೋಡ್ ನಲ್ಲಿ ಮಂಗಳವಾರ ರಾತ್ರಿ ಉದಯ ಲಾಂಡ್ರಿಯ ಮಾಲೀಕರ ಮಗ ಸಜೀಪ ಕಂದೂರು ನಿವಾಸಿ ಶರತ್ ಎಂಬ ಯುವಕನ ಮೇಲೆ ಬೈಕ್ ನಲ್ಲಿ ಬಂದ ಆಗಂತುಕರು ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಹೆಚ್ಚಿನ ತನಿಖೆ ಸಾಗಿದೆ. ಆರೆಸ್ಸೆಸ್ ಕಾರ್ಯಕರ್ತರೂ ಆಗಿರುವ ಶರತ್ ಅಂಗಡಿ ಬಾಗಿಲು ಹಾಕುವ ವೇಳೆ ಕೃತ್ಯ ನಡೆದಿದೆ ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಶರತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ತೀವ್ರ ರಕ್ತಸ್ರಾವದಿಂದ ಪರಿಸ್ಥಿತಿ ಹದಗೆಟ್ಟ ಕಾರಣ, ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು.

ಜಾಹೀರಾತು

ಘಟನೆ ಬಳಿಕ ಪರಿಸ್ಥಿತಿ ಮತ್ತೆ ಆತಂಕದಿಂದ ಕೂಡಿದೆ. ಬೆಂಗಳೂರು ಸಹಿತ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಬಿ.ಸಿ.ರೋಡಿನಲ್ಲಿ ನಿಂತಿದ್ದ ಸಾರ್ವಜನಿಕರು ಘಟನೆ ಬಳಿಕ ಗಲಿಬಿಲಿಗೊಂಡರು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಆಗಂತುಕರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖೆ ಸಾಗಿದೆ. ಹಲವಾರು ವಾಹನಗಳು ಸಂಚರಿಸುವ ಹಾಗೂ ಜನಸಂಚಾರ ಇರುವ ಈ ಜಾಗದಲ್ಲೇ ಮಾರಣಾಂತಿಕ ಹಲ್ಲೆಯನ್ನು ನಿರ್ಭೀತಿಯಿಂದ ದುಷ್ಕರ್ಮಿಗಳು ನಡೆಸಿದ್ದು, ಸಾರ್ವಜನಿಕರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ಸಾರ್ವಜನಿಕರು ಘಟನೆ ಕುರಿತು ಊಹಾಪೋಹಗಳನ್ನಾಗಲೀ, ವದಂತಿಗಳನ್ನಾಗಲೀ ಹರಡಿಸಬೇಡಿ, ತನಿಖೆಗೆ ಸಹಕರಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts